ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುರುವೇಕೆರೆ | ಗಣೇಶ ವಿಸರ್ಜನೆ ವೇಳೆ ಮೃತಪಟ್ಟವರ ಮನೆಗೆ ಶಾಸಕ ಭೇಟಿ

Published : 19 ಸೆಪ್ಟೆಂಬರ್ 2024, 12:54 IST
Last Updated : 19 ಸೆಪ್ಟೆಂಬರ್ 2024, 12:54 IST
ಫಾಲೋ ಮಾಡಿ
Comments

ತುರುವೇಕೆರೆ: ತಾಲ್ಲೂಕಿನ ರಂಗನಹಟ್ಟಿಯಲ್ಲಿ ಈಚೆಗೆ ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಮೂವರ ಮನೆಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ದಯಾನಂದ್ ಅವರ ಮನೆಗೆ ಭೇಟಿ ನೀಡಿ ವೈಯಕ್ತಿಕವಾಗಿ ₹25 ಸಾವಿರ ನೀಡಿದರು. ದಯಾನಂದ್ ಪತ್ನಿ ಪದವೀಧರಳಾಗಿದ್ದು, ಆಕೆಗೆ ಗುತ್ತಿಗೆ ಆಧಾರದಲ್ಲಿ ಹೇಮಾವತಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದರು.

ಅದೇ ಗ್ರಾಮದ ರೇವಣ್ಣ ಮತ್ತು ಶರತ್ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ₹25 ಸಾವಿರ ನೀಡಿದರು. ಎರಡೂ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಾದರಹಳ್ಳಿ ದೊಡ್ಡೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಲೀಲಾವತಿ ಗಿಡ್ಡಯ್ಯ, ಅಮ್ಮಸಂದ್ರ ಸಿದ್ದೇಗೌಡ, ಮಾರಸಂದ್ರ ಯೋಗೀಶ್, ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT