ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು | ಯುವಕನ ಕೊಲೆ: ಮೂವರು ಬಂಧನ

Published : 12 ಸೆಪ್ಟೆಂಬರ್ 2024, 4:09 IST
Last Updated : 12 ಸೆಪ್ಟೆಂಬರ್ 2024, 4:09 IST
ಫಾಲೋ ಮಾಡಿ
Comments

ತುಮಕೂರು: ನಗರ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಬಿಹಾರದ ಚೋಟನ್‌ ಕುಮಾರ್‌ (19) ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ರಾಮ್‌ಬಾಬು ಕುಮಾರ್‌ (20), ಮಂಟುಕುಮಾರ್‌ (22), ಅಜಯ್‌ಕುಮಾರ್‌ (20) ಬಂಧಿತರು. ಮತ್ತೊಬ್ಬ ಕೊಲೆ ಆರೋಪಿ ಕಾನೂನು ಸಂಘರ್ಷಕ್ಕೆ ಒಳಪಟ್ಟ 13 ವರ್ಷದ ಬಾಲಕನಿಗಾಗಿ ಶೋಧಕಾರ್ಯ ನಡೆದಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹಾಕಿದ್ದ ಪೆಂಡಾಲ್‌ನಲ್ಲಿ ಹಾಡು ಬದಲಾಯಿಸುವ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ರಚಿಸಿದ್ದ ವಿಶೇಷ ತಂಡ ಮೂವರನ್ನು ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT