<p><strong>ತುಮಕೂರು</strong>: ಅಂಗಡಿ ಮುಂಗಟ್ಟುಗಳಿಗೆ ಅಳವಡಿಸಿದ್ದ ನಾಮಫಲಕ ಧ್ವಂಸಗೊಳಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ಗೌಡ ಸೇರಿದಂತೆ 7 ಜನರನ್ನು ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ನಗರದ ಎಂ.ಜಿ.ರಸ್ತೆಯ ಅಂಗಡಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ನಾಮಫಲಕಗಳನ್ನು ಕಿತ್ತು ಹಾಕಿದ್ದರು. ಅಂಗಡಿಗಳ ಮಾಲೀಕರು ರಕ್ಷಣಾ ವೇದಿಕೆಯ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. ದೂರಿನ ಮೇರೆಗೆ 7 ಜನರನ್ನು ಬಂಧಿಸಲಾಗಿದೆ.</p>.<p>ರಂಗನಾಥ್, ಪ್ರಕಾಶ್, ಅನ್ಸರ್ಪಾಷ, ಚನ್ನಬಸವಯ್ಯ, ರಂಗನಾಥ್, ಕೆ.ಎಲ್.ಗಿರೀಶ್ ಬಂಧಿತರು. ಇವರ ಬಿಡುಗಡೆಗೆ ಆಗ್ರಹಿಸಿ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ‘ನಾಮಫಲಕ ಧ್ವಂಸಗೊಳಿಸಿದ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಅಂಗಡಿ ಮುಂಗಟ್ಟುಗಳಿಗೆ ಅಳವಡಿಸಿದ್ದ ನಾಮಫಲಕ ಧ್ವಂಸಗೊಳಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ಗೌಡ ಸೇರಿದಂತೆ 7 ಜನರನ್ನು ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ನಗರದ ಎಂ.ಜಿ.ರಸ್ತೆಯ ಅಂಗಡಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ನಾಮಫಲಕಗಳನ್ನು ಕಿತ್ತು ಹಾಕಿದ್ದರು. ಅಂಗಡಿಗಳ ಮಾಲೀಕರು ರಕ್ಷಣಾ ವೇದಿಕೆಯ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. ದೂರಿನ ಮೇರೆಗೆ 7 ಜನರನ್ನು ಬಂಧಿಸಲಾಗಿದೆ.</p>.<p>ರಂಗನಾಥ್, ಪ್ರಕಾಶ್, ಅನ್ಸರ್ಪಾಷ, ಚನ್ನಬಸವಯ್ಯ, ರಂಗನಾಥ್, ಕೆ.ಎಲ್.ಗಿರೀಶ್ ಬಂಧಿತರು. ಇವರ ಬಿಡುಗಡೆಗೆ ಆಗ್ರಹಿಸಿ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ‘ನಾಮಫಲಕ ಧ್ವಂಸಗೊಳಿಸಿದ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>