ಸಹಾಯಕ ಕೃಷಿ ನಿರ್ದೇಶಕ ಪವನ್ ಮಾತನಾಡಿ, ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ 50 ಹಾಗೂ ಪರಿಶಿಷ್ಟ ಜಾತಿ, ವರ್ಗದ ರೈತರಿಗೆ ಶೇ 90ರಷ್ಟು ಸಹಾಯಧನದಲ್ಲಿ ವಿವಿಧ ಕೃಷಿ ಯಾಂತ್ರೋಪಕರಣಗಳನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕೃಷಿ ಉಪ ನಿರ್ದೇಶಕ ಹುಲಿರಾಜ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಸದಾಶಿವಯ್ಯ, ಹುಚ್ಚಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜು, ಸಹಾಯಕ ಕೃಷಿ ನಿರ್ದೇಶಕ ಪವನ್ ಎಂ.ಪಿ., ಇಫ್ಕೊ ಸಂಸ್ಥೆಯ ಪ್ರತಿನಿಧಿ ಚಿದಂಬರಮೂರ್ತಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಅಧಿಕಾರಿಗಳು ಹಾಜರಿದ್ದರು.