<p><strong>ಗುಬ್ಬಿ:</strong> ತಾಲ್ಲೂಕಿನ ನಿಟ್ಟೂರು ಹೋಬಳಿ ಸೋಪನಹಳ್ಳಿಯ ಪರಮೇಶ್ವರಯ್ಯ ಹಾಗೂ ಮಹಾಲಿಂಗಯ್ಯ ಅವರಿಗೆ ಸೇರಿದ ಅಡಿಕೆ ಸಸಿಗಳನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ ಕಡಿದು ಹಾಕಿದ್ದಾರೆ.</p>.<p>‘ದಾರಿ ವಿಚಾರವಾಗಿ ಈ ಹಿಂದೆ ಜಗಳವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲು ಏರಲಾಗಿತ್ತು. ಈ ಹಿನ್ನೆಲೆಯಲ್ಲಿ ಜಗದೀಶ್ ಮತ್ತು ಮಹದೇವಯ್ಯ ಹಾಗೂ ಇತರರು ಮೂರು ವರ್ಷದ 50 ಅಡಿಕೆ ಸಸಿಗಳನ್ನು ಕೊಚ್ಚಿ ಹಾಕಿದ್ದಾರೆ’ ಎಂದು ಪರಮೇಶಯ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಅನ್ಯಾಯವಾಗಿದ್ದರೆ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಿ. ಅದನ್ನು ಬಿಟ್ಟು ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಸಸಿಗಳನ್ನು ಕೊಚ್ಚಿ ದೌರ್ಜನ್ಯ ಮೆರೆದಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ರೈತ ಮಹಾಲಿಂಗಯ್ಯ ಹೇಳಿದರು.</p>.<p>ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ತಾಲ್ಲೂಕಿನ ನಿಟ್ಟೂರು ಹೋಬಳಿ ಸೋಪನಹಳ್ಳಿಯ ಪರಮೇಶ್ವರಯ್ಯ ಹಾಗೂ ಮಹಾಲಿಂಗಯ್ಯ ಅವರಿಗೆ ಸೇರಿದ ಅಡಿಕೆ ಸಸಿಗಳನ್ನು ದುಷ್ಕರ್ಮಿಗಳು ಬುಧವಾರ ರಾತ್ರಿ ಕಡಿದು ಹಾಕಿದ್ದಾರೆ.</p>.<p>‘ದಾರಿ ವಿಚಾರವಾಗಿ ಈ ಹಿಂದೆ ಜಗಳವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲು ಏರಲಾಗಿತ್ತು. ಈ ಹಿನ್ನೆಲೆಯಲ್ಲಿ ಜಗದೀಶ್ ಮತ್ತು ಮಹದೇವಯ್ಯ ಹಾಗೂ ಇತರರು ಮೂರು ವರ್ಷದ 50 ಅಡಿಕೆ ಸಸಿಗಳನ್ನು ಕೊಚ್ಚಿ ಹಾಕಿದ್ದಾರೆ’ ಎಂದು ಪರಮೇಶಯ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಅನ್ಯಾಯವಾಗಿದ್ದರೆ ಪೊಲೀಸ್ ಠಾಣೆ ಅಥವಾ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಿ. ಅದನ್ನು ಬಿಟ್ಟು ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಸಸಿಗಳನ್ನು ಕೊಚ್ಚಿ ದೌರ್ಜನ್ಯ ಮೆರೆದಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ರೈತ ಮಹಾಲಿಂಗಯ್ಯ ಹೇಳಿದರು.</p>.<p>ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>