<p><strong>ತುಮಕೂರು</strong>: ರೈತರು ತಮ್ಮ ಜಮೀನಿಗಾಗಿ ಕೆರೆಗಳಿಂದ ಮಣ್ಣು ತೆಗೆಯುವ ಮುನ್ನ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗೆ ಮಾಹಿತಿ ಪತ್ರ ಸಲ್ಲಿಸಿ, ಅನುಮತಿ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಕೆರೆಗಳ ಹೂಳು ತೆಗೆಯುವ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಶೀಲ್ದಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.</p>.<p>ರೈತರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಕೆರೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಮಣ್ಣು ತೆಗೆಯಬೇಕು. ಕೆರೆಯ ಏರಿಯ ತಳ ಭಾಗದಿಂದ 10 ಮೀಟರ್ ಅಂತರ ಕಾಯ್ದಿರಿಸಬೇಕು. ಕೆರೆಯ ಮೇಲ್ಮೈ ಭಾಗದಲ್ಲಿ 3 ಅಡಿ ಮಾತ್ರ ಹೂಳು ತೆಗೆಯಲು ಅವಕಾಶ ನೀಡಬೇಕು ಎಂದು ಸೂಚಿಸಿದರು.</p>.<p>ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಈಗಾಗಲೇ ಅಮೃತ ಸರೋವರ ಕಾಮಗಾರಿಗಳು ನಡೆಯುತ್ತಿವೆ. ಕೆರೆ ಅಭಿವೃದ್ಧಿ, ಹೂಳು ತೆಗೆಯುವುದು, ಹಸಿರೀಕರಣ, ಕಾಲುವೆಗಳ ಅಭಿವೃದ್ಧಿ ಮಾಡಲು ಅವಕಾಶ ಕಲ್ಪಿಸಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ರೈತರು ತಮ್ಮ ಜಮೀನಿಗಾಗಿ ಕೆರೆಗಳಿಂದ ಮಣ್ಣು ತೆಗೆಯುವ ಮುನ್ನ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗೆ ಮಾಹಿತಿ ಪತ್ರ ಸಲ್ಲಿಸಿ, ಅನುಮತಿ ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು ತಿಳಿಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಕೆರೆಗಳ ಹೂಳು ತೆಗೆಯುವ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಶೀಲ್ದಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದರು.</p>.<p>ರೈತರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಕೆರೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಮಣ್ಣು ತೆಗೆಯಬೇಕು. ಕೆರೆಯ ಏರಿಯ ತಳ ಭಾಗದಿಂದ 10 ಮೀಟರ್ ಅಂತರ ಕಾಯ್ದಿರಿಸಬೇಕು. ಕೆರೆಯ ಮೇಲ್ಮೈ ಭಾಗದಲ್ಲಿ 3 ಅಡಿ ಮಾತ್ರ ಹೂಳು ತೆಗೆಯಲು ಅವಕಾಶ ನೀಡಬೇಕು ಎಂದು ಸೂಚಿಸಿದರು.</p>.<p>ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಈಗಾಗಲೇ ಅಮೃತ ಸರೋವರ ಕಾಮಗಾರಿಗಳು ನಡೆಯುತ್ತಿವೆ. ಕೆರೆ ಅಭಿವೃದ್ಧಿ, ಹೂಳು ತೆಗೆಯುವುದು, ಹಸಿರೀಕರಣ, ಕಾಲುವೆಗಳ ಅಭಿವೃದ್ಧಿ ಮಾಡಲು ಅವಕಾಶ ಕಲ್ಪಿಸಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>