<p><strong>ತುಮಕೂರು</strong>: ಜಿಲ್ಲೆಯಲ್ಲಿ ಕೊಳವೆ ಬಾವಿ ಕೊರೆಯಲು ಏಕ ಮಾದರಿಯ ದರ ನಿಗದಿಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ.</p>.<p>ಕೊಳವೆ ಬಾವಿ ಕೊರೆಯುವ ಯಂತ್ರಗಳ ಮಾಲೀಕರು ಮನಸ್ಸಿಗೆ ಬಂದಂತೆ ದರ ವಸೂಲಿ ಮಾಡುತ್ತಿದ್ದಾರೆ. ಈ ಹಿಂದೆ ಪ್ರತಿ ಅಡಿಗೆ ₹90–95 ವಿಧಿಸುತ್ತಿದ್ದರು. ಈಗ ಬೇಡಿಕೆ ಹೆಚ್ಚಾಗಿರುವುದರಿಂದ ಅಡಿಗೆ ₹115–120 ವಸೂಲಿ ಮಾಡುತ್ತಿದ್ದಾರೆ. ದುಬಾರಿ ದರ ನೀಡುವುದು ಕಷ್ಟಕರವಾಗಿದೆ ಎಂದು ರೈತರು ಜಿಲ್ಲಾ ಆಡಳಿತಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿ ಆಧರಿಸಿ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳು ಬರಿದಾಗಿವೆ. ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ಅನುಕೂಲಕ್ಕಾಗಿ ಕೊಳವೆ ಬಾವಿ ಕೊರೆಯಲು ಏಕದರ ನಿಗದಿಗಾಗಿ ಸಮಿತಿ ರಚಿಸಿ ಶೀಘ್ರದಲ್ಲೇ ನಿರ್ಣಯ ಕೈಗೊಳ್ಳುವಂತೆ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶಿಸಿದರು.</p>.<p>ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಹಿರಿಯ ಭೂ ವಿಜ್ಞಾನಿ ನಾಗವೇಣಿ, ‘ಬೋರ್ವೆಲ್ ಯಂತ್ರಗಳ ಮಾಲೀಕರು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂಬ ನಿಯಮವಿದೆ. ಜಿಲ್ಲೆಯಲ್ಲಿ 18 ಯಂತ್ರ ವಾಹನಗಳು ನೋಂದಣಿಯಾಗಿವೆ’ ಎಂದು ಮಾಹಿತಿ ನೀಡಿದರು.</p>.<p>ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ನೋಂದಣಿಯಾಗದ ಯಂತ್ರಗಳ ಮಾಲೀಕರಿಗೆ ನಿಯಮಾನುಸಾರ ದಂಡ ವಿಧಿಸಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ ರಿಗ್ ಯಂತ್ರ ವಾಹನಗಳ ಮಾಲೀಕರ ಪಟ್ಟಿಯನ್ನು ತುರ್ತಾಗಿ ಜಿಲ್ಲಾ ಆಡಳಿತಕ್ಕೆ ನೀಡುವಂತೆ’ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಿಗದಿಪಡಿಸಿದ ದರಕ್ಕೆ ಕೊಳವೆ ಬಾವಿ ಕೊರೆಯುವುದಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಗ್ ಯಂತ್ರ ಮಾಲೀಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯಲ್ಲಿ ಕೊಳವೆ ಬಾವಿ ಕೊರೆಯಲು ಏಕ ಮಾದರಿಯ ದರ ನಿಗದಿಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ.</p>.<p>ಕೊಳವೆ ಬಾವಿ ಕೊರೆಯುವ ಯಂತ್ರಗಳ ಮಾಲೀಕರು ಮನಸ್ಸಿಗೆ ಬಂದಂತೆ ದರ ವಸೂಲಿ ಮಾಡುತ್ತಿದ್ದಾರೆ. ಈ ಹಿಂದೆ ಪ್ರತಿ ಅಡಿಗೆ ₹90–95 ವಿಧಿಸುತ್ತಿದ್ದರು. ಈಗ ಬೇಡಿಕೆ ಹೆಚ್ಚಾಗಿರುವುದರಿಂದ ಅಡಿಗೆ ₹115–120 ವಸೂಲಿ ಮಾಡುತ್ತಿದ್ದಾರೆ. ದುಬಾರಿ ದರ ನೀಡುವುದು ಕಷ್ಟಕರವಾಗಿದೆ ಎಂದು ರೈತರು ಜಿಲ್ಲಾ ಆಡಳಿತಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿ ಆಧರಿಸಿ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳು ಬರಿದಾಗಿವೆ. ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ಅನುಕೂಲಕ್ಕಾಗಿ ಕೊಳವೆ ಬಾವಿ ಕೊರೆಯಲು ಏಕದರ ನಿಗದಿಗಾಗಿ ಸಮಿತಿ ರಚಿಸಿ ಶೀಘ್ರದಲ್ಲೇ ನಿರ್ಣಯ ಕೈಗೊಳ್ಳುವಂತೆ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶಿಸಿದರು.</p>.<p>ಜಿಲ್ಲಾ ಅಂತರ್ಜಲ ಪ್ರಾಧಿಕಾರದ ಹಿರಿಯ ಭೂ ವಿಜ್ಞಾನಿ ನಾಗವೇಣಿ, ‘ಬೋರ್ವೆಲ್ ಯಂತ್ರಗಳ ಮಾಲೀಕರು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂಬ ನಿಯಮವಿದೆ. ಜಿಲ್ಲೆಯಲ್ಲಿ 18 ಯಂತ್ರ ವಾಹನಗಳು ನೋಂದಣಿಯಾಗಿವೆ’ ಎಂದು ಮಾಹಿತಿ ನೀಡಿದರು.</p>.<p>ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ನೋಂದಣಿಯಾಗದ ಯಂತ್ರಗಳ ಮಾಲೀಕರಿಗೆ ನಿಯಮಾನುಸಾರ ದಂಡ ವಿಧಿಸಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನೋಂದಣಿಯಾಗಿರುವ ರಿಗ್ ಯಂತ್ರ ವಾಹನಗಳ ಮಾಲೀಕರ ಪಟ್ಟಿಯನ್ನು ತುರ್ತಾಗಿ ಜಿಲ್ಲಾ ಆಡಳಿತಕ್ಕೆ ನೀಡುವಂತೆ’ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಿಗದಿಪಡಿಸಿದ ದರಕ್ಕೆ ಕೊಳವೆ ಬಾವಿ ಕೊರೆಯುವುದಾಗಿ ಸಭೆಯಲ್ಲಿ ಭಾಗವಹಿಸಿದ್ದ ರಿಗ್ ಯಂತ್ರ ಮಾಲೀಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>