<p><strong>ತುಮಕೂರು</strong>: ಬುದ್ಧ, ಬಸವ, ಅಂಬೇಡ್ಕರ್ ತತ್ವ, ಸಿದ್ಧಾಂತದ ಬಗ್ಗೆ ಮಾತಿನಲ್ಲಿ ಹೇಳುವವರು ಹೆಚ್ಚಾಗಿದ್ದು, ಪಾಲಿಸುವವರು ಕಡಿಮೆಯಾಗಿದ್ದಾರೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಮಾಸಿಕ ಸಭೆ, ಕಾರ್ಮಿಕರ ದಿನ ಆಚರಣೆ ಮತ್ತು ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎಲ್ಲರು ನುಡಿದಂತೆ ನಡೆಯಬೇಕು. ಮಾತುಗಳಲ್ಲಿ ಹೇಳಿದ್ದು ಅನುಷ್ಠಾನಕ್ಕೆ ತರಬೇಕು. ಜೂನ್ ತಿಂಗಳಿನಲ್ಲಿ ಬೆಂಗಳೂರಲ್ಲಿ ನೌಕರರ ಸಮಾವೇಶ ನಡೆಯಲಿದೆ. ಎಲ್ಲರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಜಗದೀಶ್, ‘ಬಸವಣ್ಣ ಮಾನವತಾವಾದಿ, ವಿಶ್ವಗುರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿವಾರಣೆಗೆ ಶ್ರಮಿಸಿದ್ದರು’ ಎಂದು ತಿಳಿಸಿದರು.</p>.<p>ಅನುಪಮ ನಿರಂಜನ ಪ್ರಶಸ್ತಿಗೆ ಭಾಜನರಾದ ರಮಾಕುಮಾರಿ ಅವರನ್ನು ಸನ್ಮಾನಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾರಮ್ಮದ, ಭವಾನಮ್ಮ, ಮಂಜುಳಾದೇವಿ, ಸುಶೀಲಮ್ಮ, ನರೇಂದ್ರಕುಮಾರ್ ಇತರರು ವಚನ, ಹಾಡು, ಕವಿತೆ–ಕವನ ವಾಚಿಸಿದರು.</p>.<p>ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟನರಸಯ್ಯ, ಪದಾಧಿಕಾರಿಗಳಾದ ಪಿ.ನರಸಿಂಹರೆಡ್ಡಿ, ಅನಂತರಾಮಯ್ಯ, ಪಿ.ಮಲ್ಲೇಶಯ್ಯ, ಈಶ್ವರಯ್ಯ, ಮಹದೇವಯ್ಯ, ಟಿ.ಎನ್.ನರಸಿಂಹಮೂರ್ತಿ, ಪಿ.ಹುಚ್ಚಯ್ಯ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬುದ್ಧ, ಬಸವ, ಅಂಬೇಡ್ಕರ್ ತತ್ವ, ಸಿದ್ಧಾಂತದ ಬಗ್ಗೆ ಮಾತಿನಲ್ಲಿ ಹೇಳುವವರು ಹೆಚ್ಚಾಗಿದ್ದು, ಪಾಲಿಸುವವರು ಕಡಿಮೆಯಾಗಿದ್ದಾರೆ ಎಂದು ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಮಾಸಿಕ ಸಭೆ, ಕಾರ್ಮಿಕರ ದಿನ ಆಚರಣೆ ಮತ್ತು ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎಲ್ಲರು ನುಡಿದಂತೆ ನಡೆಯಬೇಕು. ಮಾತುಗಳಲ್ಲಿ ಹೇಳಿದ್ದು ಅನುಷ್ಠಾನಕ್ಕೆ ತರಬೇಕು. ಜೂನ್ ತಿಂಗಳಿನಲ್ಲಿ ಬೆಂಗಳೂರಲ್ಲಿ ನೌಕರರ ಸಮಾವೇಶ ನಡೆಯಲಿದೆ. ಎಲ್ಲರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಜಗದೀಶ್, ‘ಬಸವಣ್ಣ ಮಾನವತಾವಾದಿ, ವಿಶ್ವಗುರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿವಾರಣೆಗೆ ಶ್ರಮಿಸಿದ್ದರು’ ಎಂದು ತಿಳಿಸಿದರು.</p>.<p>ಅನುಪಮ ನಿರಂಜನ ಪ್ರಶಸ್ತಿಗೆ ಭಾಜನರಾದ ರಮಾಕುಮಾರಿ ಅವರನ್ನು ಸನ್ಮಾನಿಸಲಾಯಿತು. ಬಸವ ಜಯಂತಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾರಮ್ಮದ, ಭವಾನಮ್ಮ, ಮಂಜುಳಾದೇವಿ, ಸುಶೀಲಮ್ಮ, ನರೇಂದ್ರಕುಮಾರ್ ಇತರರು ವಚನ, ಹಾಡು, ಕವಿತೆ–ಕವನ ವಾಚಿಸಿದರು.</p>.<p>ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟನರಸಯ್ಯ, ಪದಾಧಿಕಾರಿಗಳಾದ ಪಿ.ನರಸಿಂಹರೆಡ್ಡಿ, ಅನಂತರಾಮಯ್ಯ, ಪಿ.ಮಲ್ಲೇಶಯ್ಯ, ಈಶ್ವರಯ್ಯ, ಮಹದೇವಯ್ಯ, ಟಿ.ಎನ್.ನರಸಿಂಹಮೂರ್ತಿ, ಪಿ.ಹುಚ್ಚಯ್ಯ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>