<p><strong>ವೈ.ಎನ್.ಹೊಸಕೋಟೆ:</strong> ಗ್ರಾಮದ ಅಂಬೇಡ್ಕರ್ ನಗರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಕೆಲವರಿಗೆ ಪೊಲೀಸ್ ಇಲಾಖೆ ಶನಿವಾರ ತಿಳುವಳಿಕೆ ನೋಟಿಸ್ ಜಾರಿ ಮಾಡಿದೆ.</p>.<p>ಅಂಬೇಡ್ಕರ್ ನಗರದಲ್ಲಿ ಅಕ್ರಮ ಮಧ್ಯಮಾರಾಟ ಮಾಡುತ್ತಿರುವ ವಿಚಾರ ಮೇಲಧಿಕಾರಿಗಳಿಗೆ ದೂರು ಹೋಗಿರುವ ಹಿನ್ನೆಲೆಯಲ್ಲಿ ಪಿಎಸ್ಐ ಜಯರಾಂ ಮಾರಮ್ಮ ದೇವಾಲಯದ ಬಳಿ ಸಾರ್ವಜನಿಕ ಕಾನೂನು ಅರಿವು ಮತ್ತು ಜಾಗೃತಿ ಸಭೆ ನಡೆಸಿ ತಿಳುವಳಿಕೆ ನೀಡಿದರು.</p>.<p>ಈಗಾಗಲೇ ಮದ್ಯ ಮಾರಾಟದ ಬಗ್ಗೆ ಮಾಹಿತಿ ಬಂದಿದೆ. ಅವರನ್ನು ಪತ್ತೆ ಹಚ್ಚಿ ಲಿಖಿತವಾಗಿ ತಿಳುವಳಿಕೆ ನೀಡಿದ್ದೇವೆ. ಅವರು ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಲಾಗಿದೆ. ಆದಾಗ್ಯೂ ಅವರು ತಮ್ಮ ಚಟುವಟಿಕೆಗಳನ್ನು ಮುಂದುವರೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆಯಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ತಿಳಿಸಿದರು.</p>.<p>ಪೋಲೀಸ್ ಸಿಬ್ಬಂದಿ ಮಹಂತೇಶ್, ಸದ್ದಾಂ, ಗಂಗಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೈ.ಎನ್.ಹೊಸಕೋಟೆ:</strong> ಗ್ರಾಮದ ಅಂಬೇಡ್ಕರ್ ನಗರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಕೆಲವರಿಗೆ ಪೊಲೀಸ್ ಇಲಾಖೆ ಶನಿವಾರ ತಿಳುವಳಿಕೆ ನೋಟಿಸ್ ಜಾರಿ ಮಾಡಿದೆ.</p>.<p>ಅಂಬೇಡ್ಕರ್ ನಗರದಲ್ಲಿ ಅಕ್ರಮ ಮಧ್ಯಮಾರಾಟ ಮಾಡುತ್ತಿರುವ ವಿಚಾರ ಮೇಲಧಿಕಾರಿಗಳಿಗೆ ದೂರು ಹೋಗಿರುವ ಹಿನ್ನೆಲೆಯಲ್ಲಿ ಪಿಎಸ್ಐ ಜಯರಾಂ ಮಾರಮ್ಮ ದೇವಾಲಯದ ಬಳಿ ಸಾರ್ವಜನಿಕ ಕಾನೂನು ಅರಿವು ಮತ್ತು ಜಾಗೃತಿ ಸಭೆ ನಡೆಸಿ ತಿಳುವಳಿಕೆ ನೀಡಿದರು.</p>.<p>ಈಗಾಗಲೇ ಮದ್ಯ ಮಾರಾಟದ ಬಗ್ಗೆ ಮಾಹಿತಿ ಬಂದಿದೆ. ಅವರನ್ನು ಪತ್ತೆ ಹಚ್ಚಿ ಲಿಖಿತವಾಗಿ ತಿಳುವಳಿಕೆ ನೀಡಿದ್ದೇವೆ. ಅವರು ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಲಾಗಿದೆ. ಆದಾಗ್ಯೂ ಅವರು ತಮ್ಮ ಚಟುವಟಿಕೆಗಳನ್ನು ಮುಂದುವರೆಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆಯಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ತಿಳಿಸಿದರು.</p>.<p>ಪೋಲೀಸ್ ಸಿಬ್ಬಂದಿ ಮಹಂತೇಶ್, ಸದ್ದಾಂ, ಗಂಗಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>