ಮಂಗಳವಾರ, 1 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ-ಅಮರಾಪುರ ರಸ್ತೆ ಕಾಮಗಾರಿ ಶೀಘ್ರ ಆರಂಭ: ಶಾಸಕ ಟಿ.ಬಿ.ಜಯಚಂದ್ರ

Published : 1 ಅಕ್ಟೋಬರ್ 2024, 13:24 IST
Last Updated : 1 ಅಕ್ಟೋಬರ್ 2024, 13:24 IST
ಫಾಲೋ ಮಾಡಿ
Comments

ಶಿರಾ: ಶಿರಾ- ಅಮರಾಪುರ ರಸ್ತೆಯ ಕೊಟ್ಟಗೇಟ್‌ನಿಂದ ಹುಲಿಕುಂಟೆ ಗೇಟ್‌ವರೆಗೂ ಶೀಘ್ರ ರಸ್ತೆ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ತಾಲ್ಲೂಕಿನ ಮದಲೂರು ದಾಸರಹಳ್ಳಿ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಬೈಪಾಸ್ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ರಸ್ತೆ ಅಭಿವೃದ್ಧಿ ಸಲುವಾಗಿ ಮುಖ್ಯಮಂತ್ರಿ ವಿಶೇಷ ನಿಧಿಯಿಂದ ₹30 ಕೋಟಿ ಅನುದಾನ ಬಿಡುಗಡೆ ಅಗಿದೆ. ಶಿರಾ ನಗರ ದಿನದಿಂದ ದಿನಕ್ಕೆ ವೇಗವಾಗಿ ಅಭಿವೃದ್ಧಿ ಅಗುತ್ತಿರುವ ದೃಷ್ಟಿಯಿಂದ ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಸರ್ವೆ ನಡೆಸಲಾಗಿದೆ ಎಂದರು.

ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಶಿವಕುಮಾರ್, ಸಹಾಯಕ ಎಂಜಿನಿಯರ್ ಮೃತ್ಯುಂಜಯ, ವ್ಯವಸ್ಥಾಪಕ ಹನುಮಂತಯ್ಯ ಮುಖಂಡರಾದ ಡಿ.ಸಿ.ಅಶೋಕ್, ರಮೇಶ್, ಸುಧಾಕರ್, ಮಣಿಕಂಠ, ತಿಪ್ಪೇಸ್ವಾಮಿ, ರಂಗನಾಥ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT