<p><strong>ಚಿಕ್ಕನಾಯಕನಹಳ್ಳಿ</strong>: ತುಮಕೂರು ಲೋಕಸಭೆ ಕ್ಷೇತ್ರದಿಂದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಂಭವವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.</p>.<p>ತಾಲ್ಲೂಕಿನ ಕಂದಿಕೆರೆಯಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿಯೇ ಇದ್ದ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಮತ್ತೆ ಈಗ ಕಾಂಗ್ರೆಸ್ನಲ್ಲಿ ಸಕ್ರಿಯರಾಗಿದ್ದಾರೆ. ಸಂಸತ್ ಚುನಾವಣೆಗೆ ಅವರೇ ಸ್ಪರ್ಧಿಸುವ ಸಾಧ್ಯತೆ ಶೇ 99ರಷ್ಟಿದೆ ಎಂದು ಹೇಳಿದರು.</p>.<p>ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ರೈತರಿಗಾಗುತ್ತಿದ್ದ ವಂಚನೆ ತಡೆಗೆ ಎಲ್ಲ ಹಾಲಿನ ಡೇರಿಗಳಲ್ಲಿ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ತಂತ್ರಾಂಶ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ತಮ್ಮ ಹಾಲಿನ ಗುಣಮಟ್ಟಕ್ಕೆ ಅನುಸಾರ ಸೂಕ್ತ ದರ ಸಿಗಲಿದೆ ಎಂದರು.</p>.<p>‘ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಶೇ80ರಷ್ಟು ಜನರನ್ನು ತಲುಪಿವೆ. ಶಕ್ತಿ ಯೋಜನೆ ಪರಿಣಾಮ ಹಾಸನಾಂಬೆ ದರ್ಶನಕ್ಕೆ ಈ ವರ್ಷ 4.85ಲಕ್ಷ ಮಂದಿ ಭೇಟಿ ನೀಡಿದ್ದರು. ಇದರಿಂದ ₹9.75ಕೋಟಿ ಹುಂಡಿ ಹಣ ಸಂಗ್ರಹವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ₹3 ಕೋಟಿ ಹೆಚ್ಚು ಸಂಗ್ರಹವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ</strong>: ತುಮಕೂರು ಲೋಕಸಭೆ ಕ್ಷೇತ್ರದಿಂದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಂಭವವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.</p>.<p>ತಾಲ್ಲೂಕಿನ ಕಂದಿಕೆರೆಯಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿಯೇ ಇದ್ದ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಮತ್ತೆ ಈಗ ಕಾಂಗ್ರೆಸ್ನಲ್ಲಿ ಸಕ್ರಿಯರಾಗಿದ್ದಾರೆ. ಸಂಸತ್ ಚುನಾವಣೆಗೆ ಅವರೇ ಸ್ಪರ್ಧಿಸುವ ಸಾಧ್ಯತೆ ಶೇ 99ರಷ್ಟಿದೆ ಎಂದು ಹೇಳಿದರು.</p>.<p>ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ರೈತರಿಗಾಗುತ್ತಿದ್ದ ವಂಚನೆ ತಡೆಗೆ ಎಲ್ಲ ಹಾಲಿನ ಡೇರಿಗಳಲ್ಲಿ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ತಂತ್ರಾಂಶ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ತಮ್ಮ ಹಾಲಿನ ಗುಣಮಟ್ಟಕ್ಕೆ ಅನುಸಾರ ಸೂಕ್ತ ದರ ಸಿಗಲಿದೆ ಎಂದರು.</p>.<p>‘ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಶೇ80ರಷ್ಟು ಜನರನ್ನು ತಲುಪಿವೆ. ಶಕ್ತಿ ಯೋಜನೆ ಪರಿಣಾಮ ಹಾಸನಾಂಬೆ ದರ್ಶನಕ್ಕೆ ಈ ವರ್ಷ 4.85ಲಕ್ಷ ಮಂದಿ ಭೇಟಿ ನೀಡಿದ್ದರು. ಇದರಿಂದ ₹9.75ಕೋಟಿ ಹುಂಡಿ ಹಣ ಸಂಗ್ರಹವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ₹3 ಕೋಟಿ ಹೆಚ್ಚು ಸಂಗ್ರಹವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>