ಶುಕ್ರವಾರ, 28 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾವಗಡ: ಬೆಸ್ಕಾಂ ಸಹಾಯಕ ಕಿರಿಯ ಎಂಜಿನಿಯರ್ ಆತ್ಮಹತ್ಯೆ

Published 7 ಜುಲೈ 2023, 5:34 IST
Last Updated 7 ಜುಲೈ 2023, 5:34 IST
ಅಕ್ಷರ ಗಾತ್ರ

ಪಾವಗಡ: ಪಟ್ಟಣದ ಖಾಸಗಿ ವಸತಿ ನಿಲಯದ ಕೊಠಡಿಯಲ್ಲಿ ಬುಧವಾರ ರಾತ್ರಿ ಬೆಳ್ಳಂದೂರಿನ ಬೆಸ್ಕಾಂ ಪೂರ್ವ ವಿಭಾಗದ ಸಹಾಯಕ ಕಿರಿಯ ಎಂಜಿನಿಯರ್ ಎಸ್.ಮಂಜುನಾಥ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನಿಂದ ಪಟ್ಟಣಕ್ಕೆ ಬಂದಿದ್ದ ಮಂಜುನಾಥ್‌ ವೈ.ಎನ್ ಹೊಸಕೋಟೆಗೆ ಹೋಗಲು ಬಸ್‌ ಇಲ್ಲ ಎಂದು ತಿಳಿಸಿ ಬುಧವಾರ ರಾತ್ರಿ ಪಟ್ಟಣದ ಖಾಸಗಿ ವಸತಿ ಗೃಹದಲ್ಲಿ ಕೊಠಡಿ ಪಡೆದಿದ್ದರು. ಗುರುವಾರ ಬೆಳಿಗ್ಗೆ 8ಗಂಟೆಯಾದರೂ ಕೊಠಡಿಯಿಂದ ಹೊರಬಾರದಿರುವುದರಿಂದ ಅನುಮಾನಗೊಂಡ ವಸತಿ ಗೃಹದ ಸಿಬ್ಬಂದಿ ಕಿಟಕಿಯಿಂದ ನೋಡಿದಾಗ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ.

ಮದುವೆ ವಿಚಾರದಲ್ಲಿ ಬೇಸರಗೊಂಡು ಮಂಜುನಾಥ್‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೃತರ ಸೋದರ ಪಟ್ಟಣದ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT