<p><strong>ತುಮಕೂರು</strong>: ಸಂಶೋಧನೆಗಳು ಪಠ್ಯಕ್ರಮದ ಸುಧಾರಣೆ, ಪ್ರಗತಿಗೆ ಸಹಾಯಕವಾಗುತ್ತವೆ. ಹೆಚ್ಚಿನ ಜ್ಞಾನ, ಕೌಶಲ, ತಿಳಿವಳಿಕೆಯು ವೃತ್ತಿಪರ ಕಲಿಕೆಗೆ ಆಧಾರವಾಗುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ‘ಸಾಹೇ’ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಪರಮೇಶ್ವರ ತಿಳಿಸಿದರು.</p>.<p>ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈಚೆಗೆ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿ ಒಳಗೊಂಡ ‘ಪರಂ-24’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.</p>.<p>ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಪ್ರಕಟಿಸುವ ವೈಜ್ಞಾನಿಕ ಮತ್ತು ಸಂಶೋಧನಾ ನಿಯತಕಾಲಿಕೆಗಳು ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡುತ್ತವೆ. ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶಿ ಕೈಪಿಡಿಗಳಾಗುತ್ತವೆ. ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಲೇಖನ, ಶೈಕ್ಷಣಿಕ ಪ್ರಬಂಧ ಪ್ರಕಟವಾಗುವುದರಿಂದ ಸಂಶೋಧಕರ ಪಾತ್ರ ಮತ್ತು ಸಂಶೋಧನೆಯ ವಿಶ್ವಾಸಾರ್ಹತೆ ಹೆಚ್ಚುತ್ತದೆ ಎಂದರು.</p>.<p>ಶೈಕ್ಷಣಿಕ ನಿಯತಕಾಲಿಕೆಗಳು ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳ ಮಧ್ಯೆ ಉತ್ತಮ ಸಂವಹನಕ್ಕೆ ಸಹಕಾರಿಯಾಗುತ್ತವೆ. ಶಿಕ್ಷಣ ನಮ್ಮ ಜೀವನದ ಎಲ್ಲ ಸವಾಲು, ಅನುಮಾನ ಮತ್ತು ಭಯಗಳನ್ನು ತೊಡೆದುಹಾಕಲು ಸಹಾಯ ಮಾಡುವ ಸಾಧನವಾಗಿದೆ ಎಂದು ಹೇಳಿದರು.</p>.<p>ಸಾಹೇ ವಿ.ವಿ ರಿಜಿಸ್ಟ್ರಾರ್ ಎಂ.ಝಡ್.ಕುರಿಯನ್, ಎಸ್ಎಸ್ಐಟಿ ಪ್ರಾಂಶುಪಾಲ ಎಂ.ಎಸ್.ರವಿಪ್ರಕಾಶ್, ಎಂಸಿಎ ವಿಭಾಗದ ಮುಖ್ಯಸ್ಥ ಪ್ರೊ.ಡಿ.ರಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸಂಶೋಧನೆಗಳು ಪಠ್ಯಕ್ರಮದ ಸುಧಾರಣೆ, ಪ್ರಗತಿಗೆ ಸಹಾಯಕವಾಗುತ್ತವೆ. ಹೆಚ್ಚಿನ ಜ್ಞಾನ, ಕೌಶಲ, ತಿಳಿವಳಿಕೆಯು ವೃತ್ತಿಪರ ಕಲಿಕೆಗೆ ಆಧಾರವಾಗುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ‘ಸಾಹೇ’ ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಪರಮೇಶ್ವರ ತಿಳಿಸಿದರು.</p>.<p>ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈಚೆಗೆ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿ ಒಳಗೊಂಡ ‘ಪರಂ-24’ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.</p>.<p>ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಪ್ರಕಟಿಸುವ ವೈಜ್ಞಾನಿಕ ಮತ್ತು ಸಂಶೋಧನಾ ನಿಯತಕಾಲಿಕೆಗಳು ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡುತ್ತವೆ. ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶಿ ಕೈಪಿಡಿಗಳಾಗುತ್ತವೆ. ಪ್ರತಿಷ್ಠಿತ ನಿಯತಕಾಲಿಕೆಗಳಲ್ಲಿ ಲೇಖನ, ಶೈಕ್ಷಣಿಕ ಪ್ರಬಂಧ ಪ್ರಕಟವಾಗುವುದರಿಂದ ಸಂಶೋಧಕರ ಪಾತ್ರ ಮತ್ತು ಸಂಶೋಧನೆಯ ವಿಶ್ವಾಸಾರ್ಹತೆ ಹೆಚ್ಚುತ್ತದೆ ಎಂದರು.</p>.<p>ಶೈಕ್ಷಣಿಕ ನಿಯತಕಾಲಿಕೆಗಳು ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳ ಮಧ್ಯೆ ಉತ್ತಮ ಸಂವಹನಕ್ಕೆ ಸಹಕಾರಿಯಾಗುತ್ತವೆ. ಶಿಕ್ಷಣ ನಮ್ಮ ಜೀವನದ ಎಲ್ಲ ಸವಾಲು, ಅನುಮಾನ ಮತ್ತು ಭಯಗಳನ್ನು ತೊಡೆದುಹಾಕಲು ಸಹಾಯ ಮಾಡುವ ಸಾಧನವಾಗಿದೆ ಎಂದು ಹೇಳಿದರು.</p>.<p>ಸಾಹೇ ವಿ.ವಿ ರಿಜಿಸ್ಟ್ರಾರ್ ಎಂ.ಝಡ್.ಕುರಿಯನ್, ಎಸ್ಎಸ್ಐಟಿ ಪ್ರಾಂಶುಪಾಲ ಎಂ.ಎಸ್.ರವಿಪ್ರಕಾಶ್, ಎಂಸಿಎ ವಿಭಾಗದ ಮುಖ್ಯಸ್ಥ ಪ್ರೊ.ಡಿ.ರಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>