<p><strong>ಉಡುಪಿ</strong>: ಸಹಕಾರ, ಸಹಬಾಳ್ವೆ, ವ್ಯಕ್ತಿತ್ವ ವಿಕಸನ, ಹಿತಮಿತ ಜೀವನ ಶೈಲಿಯ ಅರಿವಿಕೆಗೆ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆ ಎಂದು ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಶ್ವನಾಥ ಕರಬ ಹೇಳಿದರು.</p>.<p>ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶಿಬಿರದ ವೇಳಾಪಟ್ಟಿಯು, ಜೀವನ ಶಿಕ್ಷಣಕ್ಕೆ ಅಗತ್ಯವಿರುವ ವಿಷಯಗಳನ್ನೊಳಗೊಂಡಿದ್ದು, ಸಮಯ ಪರಿಪಾಲನೆಯೊಂದಿಗೆ, ವಿದ್ಯಾರ್ಥಿಗಳಿಗೆ ಸಮಯದ ಮೌಲ್ಯ ಕಲಿಸಿಕೊಡುತ್ತದೆ ಎಂದರು.</p>.<p>ವಿದ್ಯಾರ್ಥಿಗಳಲ್ಲಿ ಸ್ವಾರ್ಥ ಮನೋಭಾವ ತೊಡೆದು ಕೃತಜ್ಞತೆ ವ್ಯಕ್ತಪಡಿಸುವ ಮನೋಭಾವ ಹೆಚ್ಚಿಸುವ ಅಗತ್ಯವಿದೆ ಎಂದು ಹೇಳಿದರು.</p>.<p>ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ, ಶೈಕ್ಷಣಿಕ, ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ನಿತ್ಯಾನಂದ ವಿ.ಗಾಂವ್ಕರ್ ವಹಿಸಿದ್ದರು.</p>.<p>ಕಾರ್ಯಕ್ರಮ ಯೋಜನಾಧಿಕಾರಿ ರಘು ನಾಯ್ಕ, ಮಮತಾ, ಮೇವಿ ಮಿರಾಂದ, ವಾಣಿಜ್ಯ ವಿಭಾಗ ಮುಖ್ಯಸ್ಥ ಬಿಂದು ಟಿ, ಸಹಾಯಕ ಪ್ರಾಧ್ಯಾಪಕಿ ಗೀತಾ, ಸಮಾಜಕಾರ್ಯ ಉಪನ್ಯಾಸಕಿ ಸುಮತಿ, ಶಿಬಿರದ ವಿದ್ಯಾರ್ಥಿ ನಾಯಕಿ ಯವನಿಕ, ವಿದ್ಯಾರ್ಥಿಗಳಾದ ಅಂಕಿತ್ ಕುಮಾರ್, ಸ್ಪೂರ್ತಿ ಕುಮಾರ್, ಅನುಷ ಇದ್ದರು.</p>.<p>ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ, ಗುಂಪುಗಳಿಗೆ ಬಹುಮಾನ ವಿತರಿಸಲಾಯಿತು. ಸ್ಫೂರ್ತಿ ಕುಮಾರ್ ಕಾರ್ಯಕ್ರಮದ ವರದಿ ವಾಚನ ಮಾಡಿದರು. ಗ್ರೀಷ್ಮ ಸ್ವಾಗತಿಸಿದರು. ಶರಣ್ಯ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಹಕಾರ, ಸಹಬಾಳ್ವೆ, ವ್ಯಕ್ತಿತ್ವ ವಿಕಸನ, ಹಿತಮಿತ ಜೀವನ ಶೈಲಿಯ ಅರಿವಿಕೆಗೆ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ವೇದಿಕೆ ಎಂದು ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಶ್ವನಾಥ ಕರಬ ಹೇಳಿದರು.</p>.<p>ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶಿಬಿರದ ವೇಳಾಪಟ್ಟಿಯು, ಜೀವನ ಶಿಕ್ಷಣಕ್ಕೆ ಅಗತ್ಯವಿರುವ ವಿಷಯಗಳನ್ನೊಳಗೊಂಡಿದ್ದು, ಸಮಯ ಪರಿಪಾಲನೆಯೊಂದಿಗೆ, ವಿದ್ಯಾರ್ಥಿಗಳಿಗೆ ಸಮಯದ ಮೌಲ್ಯ ಕಲಿಸಿಕೊಡುತ್ತದೆ ಎಂದರು.</p>.<p>ವಿದ್ಯಾರ್ಥಿಗಳಲ್ಲಿ ಸ್ವಾರ್ಥ ಮನೋಭಾವ ತೊಡೆದು ಕೃತಜ್ಞತೆ ವ್ಯಕ್ತಪಡಿಸುವ ಮನೋಭಾವ ಹೆಚ್ಚಿಸುವ ಅಗತ್ಯವಿದೆ ಎಂದು ಹೇಳಿದರು.</p>.<p>ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ, ಶೈಕ್ಷಣಿಕ, ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ನಿತ್ಯಾನಂದ ವಿ.ಗಾಂವ್ಕರ್ ವಹಿಸಿದ್ದರು.</p>.<p>ಕಾರ್ಯಕ್ರಮ ಯೋಜನಾಧಿಕಾರಿ ರಘು ನಾಯ್ಕ, ಮಮತಾ, ಮೇವಿ ಮಿರಾಂದ, ವಾಣಿಜ್ಯ ವಿಭಾಗ ಮುಖ್ಯಸ್ಥ ಬಿಂದು ಟಿ, ಸಹಾಯಕ ಪ್ರಾಧ್ಯಾಪಕಿ ಗೀತಾ, ಸಮಾಜಕಾರ್ಯ ಉಪನ್ಯಾಸಕಿ ಸುಮತಿ, ಶಿಬಿರದ ವಿದ್ಯಾರ್ಥಿ ನಾಯಕಿ ಯವನಿಕ, ವಿದ್ಯಾರ್ಥಿಗಳಾದ ಅಂಕಿತ್ ಕುಮಾರ್, ಸ್ಪೂರ್ತಿ ಕುಮಾರ್, ಅನುಷ ಇದ್ದರು.</p>.<p>ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ, ಗುಂಪುಗಳಿಗೆ ಬಹುಮಾನ ವಿತರಿಸಲಾಯಿತು. ಸ್ಫೂರ್ತಿ ಕುಮಾರ್ ಕಾರ್ಯಕ್ರಮದ ವರದಿ ವಾಚನ ಮಾಡಿದರು. ಗ್ರೀಷ್ಮ ಸ್ವಾಗತಿಸಿದರು. ಶರಣ್ಯ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>