ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣ ಕಾಮಗಾರಿ ಕುಂಟುತ್ತಾ ಸಾಗಿದ್ದು ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ವಾಕಿಂಗ್ ಟ್ರಾಕ್ ಹಾಗೂ ಉದ್ಯಾನ ಸ್ಥಾಪಿಸಬೇಕು, ಹೆಜಮಾಡಿಯಲ್ಲಿ ಸರ್ಕಾರಿ ತಾಲ್ಲೂಕು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದ್ದು, ಶೀಘ್ರ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಬೇಕು, ಕ್ಷೇತ್ರದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ಕಾಮಗಾರಿ ಹಾಗೂ ನಿರ್ವಹಣೆಯಿಂದ ನಿತ್ಯ ಅಮೂಲ್ಯ ಜೀವಗಳು ಬಲಿಯಾಗುತಿದ್ದು, ಸುಸಜ್ಜಿತ ಸರ್ವೀಸ್ ರಸ್ತೆ ನಿರ್ಮಾಣ ಮಾಡಬೇಕು, ಪಡುಬಿದ್ರಿ ಮತ್ತು ಕಟಪಾಡಿ ಜಂಕ್ಷನ್ಗಳಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಬಡ ವಿಧ್ಯಾರ್ಥಿಗಳಿಗೆ ಅಂಗ್ಲಮಾಧ್ಯಮದ ಭೋಧನೆಯ ಜತೆಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಮನೆ ಇಲ್ಲದವರಿಗೆ ನಿವೇಶನ ಸಹಿತ ಮನೆ ಮಂಜೂರು ಮಾಡಬೇಕು.