ಪೊಲೀಸ್ ಮಾಹಿತಿದಾರ ಎಂಬ ಕಾರಣಕ್ಕಾಗಿ ಸದಾಶಿವ ಗೌಡ ಅವರನ್ನು ಅಪಹರಿಸಿದ್ದ ನಕ್ಸಲರ ತಂಡ ಕಬ್ಬಿನಾಲೆಯ ದಟ್ಟ ಅರಣ್ಯದಲ್ಲಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಹೆಬ್ರಿ, ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ರಮೇಶ್, ಕನ್ಯಾ ಕುಮಾರಿ ಸಹಿತ ಹಲವು ಆರೋಪಿಗಳನ್ನು ಬಂಧಿಸಿದ್ದರು. ರಮೇಶ್, ಕನ್ಯಾ ಕುಮಾರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಗಳಾಗಿದ್ದಾರೆ.