ಉಡುಪಿ: ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆ ಶನಿವಾರವೂ ಮುಂದುವರಿದಿದ್ದು, ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಶನಿವಾರ ಬೆಳಿಗ್ಗೆ ಎರಡು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಗೆ ನಗರದ ವಿವಿಧೆಡೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನ ಸವಾರರು ಪರದಾಡಿದರು.
ಭಾರಿ ಮಳೆಯಿಂದಾಗಿ ಬೆಳಿಗ್ಗೆ ಕೆಲಸಕ್ಕೆ ತೆರಳುವವರಿಗೆ ಕೂಡ ಸಮಸ್ಯೆಯಾಯಿತು.
ಕಾಪು, ಹಿರಿಯಡ್ಕ, ಹೆಬ್ರಿ, ಬ್ರಹ್ಮಾವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಮಳೆ ಸುರಿದಿದೆ.