ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳೆಬೆಟ್ಟುವಿನಲ್ಲಿ ನಿರ್ಮಾಣವಾಗುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಬುಧವಾರ ಶಾಸಕ ಕೆ.ರಘುಪತಿ ಭಟ್ ಪರಿಶೀಲಿಸಿದರು.
ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಹಾಗೂ ಎಂಜಿನಿಯರ್ಗಳಿಗೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್ ಟಿ.ಪ್ರಸನ್ನ ಕುಮಾರ್, ಸಮುದಾಯ ಸಂಘಟನಾಧಿಕಾರಿ ಎಸ್.ಎಸ್.ನಾರಾಯಣ್ ಮತ್ತು ಗುತ್ತಿಗೆದಾರರಾದ ನಿಹಾಲ್ ಭಟ್ ಇದ್ದರು.