ಘಟಕದ ಸುತ್ತಮುತ್ತ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿದ್ದು, ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಂಪನಿ ಕದ್ದು ಮುಚ್ಚಿ ಎಣ್ಣೆ ಮಿಶ್ರಿತ ನೀರು ಮಳೆನೀರಿನೊಂದಿಗೆ ಹರಿಯಲು ಬಿಡುತ್ತಿದ್ದು, ಮುಂದಿನ ದಿನಗಳಲ್ಲಿ ಕೃಷಿ ಭೂಮಿ ಸಹಿತ ಬಾವಿಗಳು ಕಲುಷಿತಗೊಳ್ಳುವ ಭೀತಿಯಿದೆ. ಇದನ್ನು ತಡೆಗಟ್ಟದಿದ್ದಲ್ಲಿ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.