<p><strong>ಪಡುಬಿದ್ರಿ</strong>: ಪತ್ರಕರ್ತರು ನಿರ್ಭೀತ ವರದಿ ಮಾಡುವ ಎದೆಗಾರಿಕೆ, ನ್ಯಾಯ ನಿಷ್ಠುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣ ಹೊಂದಿರಬೇಕು ಎಂದು ತುಳು ಜಾನಪದ ಸಂಶೋಧಕ ವೈ.ಎನ್.ಶೆಟ್ಟಿ ಹೇಳಿದರು.</p>.<p>ಅವರು ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಚರಣೆ, ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ–ದತ್ತಿನಿಧಿ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಿ ಉಪನ್ಯಾಸ ನೀಡಿದರು.</p>.<p>ಪತ್ರಕರ್ತರಲ್ಲಿ ಹಲವು ಆದರ್ಶ ವ್ಯಕ್ತಿತ್ವಗಳಿದ್ದಾರೆ. ಅವರ ಪೈಕಿ ಪತ್ರಕರ್ತ ದಿ.ಜಯಂತ್ ಅವರನ್ನು ಪರಿಗಣಿಸಬಹುದು ಎಂದರು.</p>.<p>ಪತ್ರಕರ್ತ ರಾಮಚಂದ್ರ ಆಚಾರ್ಯ ಮಾತನಾಡಿ, ಈಚಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರ ಆಧುನಿಕತೆಗೆ ತಕ್ಕಂತೆ ವಿವಿಧ ರೂಪಗಳನ್ನು ಪಡೆದುಕೊಂಡಿದೆ. ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ವಿದ್ಯಾರ್ಥಿಗಳು ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕಸಾಪ ಪ್ರಕಟಿಸಿದ ಕಸಪಾ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ನೀಡಿದ್ದ 120 ಕೃತಿಗಳನ್ನು, ದಿನಪತ್ರಿಕೆಗಳನ್ನು ವಿತರಿಸಲಾಯಿತು. 12 ವಿದ್ಯಾರ್ಥಿಗಳಿಗೆ ಪತ್ರಕರ್ತ ಜಯಂತ್ ಪಡುಬಿದ್ರಿ ದತ್ತಿನಿಯನ್ನು ವಿತರಿಸಲಾಯಿತು.</p>.<p>ಪ್ರಭಾರ ಪ್ರಾಂಶುಪಾಲ ಅಜಯ್ ಕುಮಾರ್ ಎಸ್, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಗೀತಾ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಕಾಪು, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರಿ ಇದ್ದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ ಸ್ವಾಗತಿಸಿದರು. ಪತ್ರಕರ್ತ ಪುಂಡಲೀಕ ಮರಾಠೆ ನಿರೂಪಿಸಿದರು. ಪೂರ್ವಾಧ್ಯಕ್ಷ ರಾಕೇಶ್ ಕುಂಜೂರು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong>: ಪತ್ರಕರ್ತರು ನಿರ್ಭೀತ ವರದಿ ಮಾಡುವ ಎದೆಗಾರಿಕೆ, ನ್ಯಾಯ ನಿಷ್ಠುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣ ಹೊಂದಿರಬೇಕು ಎಂದು ತುಳು ಜಾನಪದ ಸಂಶೋಧಕ ವೈ.ಎನ್.ಶೆಟ್ಟಿ ಹೇಳಿದರು.</p>.<p>ಅವರು ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಚರಣೆ, ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ–ದತ್ತಿನಿಧಿ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಿ ಉಪನ್ಯಾಸ ನೀಡಿದರು.</p>.<p>ಪತ್ರಕರ್ತರಲ್ಲಿ ಹಲವು ಆದರ್ಶ ವ್ಯಕ್ತಿತ್ವಗಳಿದ್ದಾರೆ. ಅವರ ಪೈಕಿ ಪತ್ರಕರ್ತ ದಿ.ಜಯಂತ್ ಅವರನ್ನು ಪರಿಗಣಿಸಬಹುದು ಎಂದರು.</p>.<p>ಪತ್ರಕರ್ತ ರಾಮಚಂದ್ರ ಆಚಾರ್ಯ ಮಾತನಾಡಿ, ಈಚಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರ ಆಧುನಿಕತೆಗೆ ತಕ್ಕಂತೆ ವಿವಿಧ ರೂಪಗಳನ್ನು ಪಡೆದುಕೊಂಡಿದೆ. ಮಾಧ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ವಿದ್ಯಾರ್ಥಿಗಳು ಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ದಿ.ಜಯಂತ್ ಪಡುಬಿದ್ರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕಸಾಪ ಪ್ರಕಟಿಸಿದ ಕಸಪಾ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ನೀಡಿದ್ದ 120 ಕೃತಿಗಳನ್ನು, ದಿನಪತ್ರಿಕೆಗಳನ್ನು ವಿತರಿಸಲಾಯಿತು. 12 ವಿದ್ಯಾರ್ಥಿಗಳಿಗೆ ಪತ್ರಕರ್ತ ಜಯಂತ್ ಪಡುಬಿದ್ರಿ ದತ್ತಿನಿಯನ್ನು ವಿತರಿಸಲಾಯಿತು.</p>.<p>ಪ್ರಭಾರ ಪ್ರಾಂಶುಪಾಲ ಅಜಯ್ ಕುಮಾರ್ ಎಸ್, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಗೀತಾ ಮಾತನಾಡಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್ ಕಾಪು, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರಿ ಇದ್ದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ ಸ್ವಾಗತಿಸಿದರು. ಪತ್ರಕರ್ತ ಪುಂಡಲೀಕ ಮರಾಠೆ ನಿರೂಪಿಸಿದರು. ಪೂರ್ವಾಧ್ಯಕ್ಷ ರಾಕೇಶ್ ಕುಂಜೂರು ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>