<p><strong>ಕಾಪು(ಉಡುಪಿ ಜಿಲ್ಲೆ):</strong> ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p><p>ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು ಭಾಗದಲ್ಲಿ ಲೀಲಣ್ಣ ಎಂದೇ ಪ್ರಸಿದ್ಧಿ ಪಡೆದಿದ್ದರು. ಕಾಪು ರಂಗ ತರಂಗ ನಾಟಕ ತಂಡವನ್ನು ಕಟ್ಟಿಕೊಂಡು ಹಲವು ಕಡೆಗಳಲ್ಲಿ ಪ್ರದರ್ಶನ ನೀಡುತ್ತಿದ್ದರು.</p><p>ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಲೀಲಾಧರ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಮ್ಮೆ ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು.</p><p>ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಕರಂದಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.</p><p>ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು(ಉಡುಪಿ ಜಿಲ್ಲೆ):</strong> ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p><p>ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು ಭಾಗದಲ್ಲಿ ಲೀಲಣ್ಣ ಎಂದೇ ಪ್ರಸಿದ್ಧಿ ಪಡೆದಿದ್ದರು. ಕಾಪು ರಂಗ ತರಂಗ ನಾಟಕ ತಂಡವನ್ನು ಕಟ್ಟಿಕೊಂಡು ಹಲವು ಕಡೆಗಳಲ್ಲಿ ಪ್ರದರ್ಶನ ನೀಡುತ್ತಿದ್ದರು.</p><p>ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಲೀಲಾಧರ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಮ್ಮೆ ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು.</p><p>ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಕರಂದಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾಗಿದ್ದರು.</p><p>ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>