ಭಾರತ ಸರ್ಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಮಠಕ್ಕೆ ಬಂದ ಉದಯ್ ಹಾಗೂ ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಗುರುವಾರ ಬೆಳಿಗ್ಗೆ ವಿಶೇಷ ದರ್ಶನ ಮಾಡಿಸಿದ್ದೇವೆ. ಅವರ ಚಲನವಲನದಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರ ನೀಡಿಲ್ಲ. ಪ್ರಧಾನಿ ಕಾರ್ಯಾಲಯದ ವೆಬ್ಸೈಟ್ ಅನ್ನು ಪರಿಶೀಲಿಸಿದಾಗ ಅವರ ಬಗ್ಗೆ ಸಮರ್ಪಕವಾದ ಮಾಹಿತಿ ದೊರೆತಿಲ್ಲ. ಕೇಂದ್ರ ಸರ್ಕಾರದ ಅಧಿಕಾರಿ ಎಂದು ಹೇಳಿಕೊಂಡು, ಮಠಕ್ಕೆ ಬಂದು, ಮೋಸ ಮಾಡಿದ್ದಾರೆ ಎಂದು ಮಠದ ವ್ಯವಸ್ಥಾಪಕ ನಂದನ್ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.