ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಟ್ಕಳ | ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ವಿದ್ಯಾರ್ಥಿ ಸಾವು

Published : 6 ಅಕ್ಟೋಬರ್ 2024, 14:05 IST
Last Updated : 6 ಅಕ್ಟೋಬರ್ 2024, 14:05 IST
ಫಾಲೋ ಮಾಡಿ
Comments

ಭಟ್ಕಳ: ‘ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿಯೋರ್ವ ಸಮುದ್ರದ ಅಲೆಗೆ ಸಿಲುಕಿ ಓರ್ವ ಸಾವನ್ನಪ್ಪಿದ್ದರೆ ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರು ನಿವಾಸಿ ಗೌತಮ ಕೆ.ವಿ ಮೃತ ವಿದ್ಯಾರ್ಥಿ ಬೆಂಗಳೂರಿನ ಧನುಶ್ .ಡಿ. ರಕ್ಷಣೆಗೊಳಗಾದ ವಿದ್ಯಾರ್ಥಿಯಾಗಿದ್ದಾನೆ.

ಬೆಂಗಳೂರಿನಿಂದ ವಿದ್ಯಾ ಸೌಧ ಕಾಲೇಜಿನ 220 ವಿದ್ಯಾರ್ಥಿಗಳು ಭಾನುವಾರ ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಸಮುದ್ರದ ಆಳದಲ್ಲಿ ಈಜಲು ತೆರಳಿದ್ದು ಅಲೆಯ ಹೊಡೆತಕ್ಕೆ ಗೌತಮ್ ನೀರಿನಲ್ಲಿ ಮುಳಿಗಿದ್ದು ಇನ್ನೊಬ್ಬ ವಿದ್ಯಾರ್ಥಿ ಧನುಷ್ ನನ್ನು ನೋಡಿದ ಲೈಫ್ ಗಾರ್ಡ ಹಾಗೂ ಪೊಲೀಸರು ಆತನ ರಕ್ಷಣೆ ಓಷಿಯನ್ ಅನ್ವೆಂಚರ್ಸ್ ನವರ ಮೂರು ಬೋಟುಗಳನ್ನು ಕೊಂಡೆಯು ಧನುಷ್ ನನ್ನು ರಕ್ಷಣೆ ಮಾಡಿದ್ದಾರೆ. ಆದರೇ ಗೌತಮ್ ಕೂಡ ಈಜಲು ಬಂದಿರುವ ಬಗ್ಗೆ ಧನುಷ್ ಮಾಹಿತಿ ಹೇಳಿರಲಿಲ್ಲ.

ವಿದ್ಯಾರ್ಥಿ ಸಂಖ್ಯೆ ಎಣಿಸಿದಾಗ ಗೌತಮ್ ಕೂಡ ಸಮುದ್ರದಲ್ಲಿ ಈಜಲು ಹೋಗಿರುವುದು ಗಮನಕ್ಕೆ ಬಂದು ಮುರುಡೇಶ್ವರ ಎ.ಸ್.ಐ ರುದ್ರೇಶ್, ಲೈಪ್ ಗಾರ್ಡ ಹಾಗೂ ಓಷಿಯನ್ ಅನ್ವೆಂಚರ್ಸ್ ತಂಡ ದಿಂದ ಶೋಧ ನಡೆಸಿದರೂ ರಕ್ಷಣೆ ಸಾಧ್ಯವಾಗಲಿಲ್ಲ. ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT