<p><strong>ಕಾರವಾರ</strong>: ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಈ ಬಾರಿ ಯಾರನ್ನು ಕಣಕ್ಕೆ ಇಳಿಸಲಿದೆ ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಸತತ ಏಳು ಅವಧಿಯಿಂದ ಸ್ಪರ್ಧಿಸುತ್ತಿರುವ ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರನ್ನು ವಿರೋಧದ ನಡುವೆಯೂ ಕಣಕ್ಕೆ ಇಳಿಸಲಾಗುವುದೇ? ಅಥವಾ ‘ಅಚ್ಚರಿ’ ಅಭ್ಯರ್ಥಿಗೆ ಅವಕಾಶ ಸಿಗುವುದೇ ಎಂಬ ಚರ್ಚೆ ನಡೆದಿದೆ.</p>.<p>ಅನಂತಕುಮಾರ ವಿರುದ್ಧ ಕ್ಷೇತ್ರದಲ್ಲಿ ಈ ಸಲ ಅಸಮಾಧಾನ ಹೆಚ್ಚಿದೆ. ಹೀಗಾಗಿ ಅವರನ್ನು ಕಣಕ್ಕಿಳಿಸುವ ಅನುಮಾನ ಒಂದೆಡೆಯಿದ್ದರೆ, ಪ್ರಾಯೋಗಿಕವಾಗಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಬಹುದು ಎಂಬ ಲೆಕ್ಕಾಚಾರವಿದೆ.</p>.<p>ಒಂದು ವೇಳೆ ಹೀಗೆ ಬೆಳವಣಿಗೆಗಳು ನಡೆದರೆ, ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಹರಿಪ್ರಕಾಶ ಕೋಣೆಮನೆ ಅಥವಾ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪೈಕಿ ಒಬ್ಬರು ಕಣಕ್ಕಿಳಿಯಬಹುದು.</p>.<p>ವಿಶ್ವೇಶ್ವರ ಹೆಗಡೆ ಮತ್ತು ಹರಿಪ್ರಕಾಶ ಕೋಣೆಮನೆ ಕ್ಷೇತ್ರದಲ್ಲಿ ಓಡಾಡಿ ಕಾರ್ಯಕರ್ತರನ್ನು ಭೇಟಿಯಾದರೆ, ಚಕ್ರವರ್ತಿ ಸೂಲಿಬೆಲೆ ನಮೋ ಬ್ರಿಗೇಡ್ ಮೂಲಕ ಮೋದಿ ಸರ್ಕಾರದ ಸಾಧನೆ ಬಿಂಬಿಸುವ ಕಾರ್ಯಕ್ರಮ ನಡೆಸಿದ್ದಾರೆ.</p>.<p>‘ಸಂಸದ ಅನಂತಕುಮಾರ ಹೆಗಡೆ ಜನರಿಂದ ದೂರವಿದ್ದಾರೆ. ಚುನಾವಣೆ ಹೊಸ್ತಿಲಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಅವರಿಗೆ ಟಿಕೆಟ್ ನೀಡುವುದು ಅನುಮಾನ’ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಹೇಳಿದರು.</p>.<p>‘ಅನಂತಕುಮಾರ ಇಂತಹ ವಿರೋಧ ಎದುರಿಸಿದ್ದು ಇದು ಮೊದಲಲ್ಲ. ಈ ಹಿಂದೆಯೂ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತವಾಗಿತ್ತು. ಅವರನ್ನು ಅಭ್ಯರ್ಥಿಯಾಗಿಸುವ ಬಗ್ಗೆ ಆರ್ಎಸ್ಎಸ್ ಪ್ರಮುಖರ ಒಲವಿದೆ’ ಎಂದು ಸಂಸದರ ಆಪ್ತರೊಬ್ಬರು ತಿಳಿಸಿದರು.</p>.<p>‘ಅನಂತಕುಮಾರ ಅವರು ಸಕ್ರಿಯವಾಗಿರದ ಕಾರಣ ನನ್ನನ್ನೂ ಸೇರಿ ಹಲವರು ಸ್ಪರ್ಧೆಗೆ ಆಕಾಂಕ್ಷಿಯಾಗಿದ್ದೆವು. ಈಗ ಅವರು ಕ್ಷೇತ್ರದಲ್ಲಿ ಸುತ್ತಾಟ ಆರಂಭಿಸಿದ್ದರಿಂದ ಅವರೇ ಸ್ಪರ್ಧಿಸುವ ನಿರೀಕ್ಷೆ ಇದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದು ಕುತೂಹಲ ಹೆಚ್ಚಿಸಿದೆ.</p>.<p>‘ಚಕ್ರವರ್ತಿ ಸೂಲಿಬೆಲೆ ಅವರಿಗೆ ರಾಜಕೀಯವಾಗಿ ಆಸಕ್ತಿ ಇಲ್ಲ. ಈ ಬಾರಿ ಅವಕಾಶ ಹುಡುಕಿಕೊಂಡು ಬಂದರೆ ಸ್ಪರ್ಧೆಗೆ ಅವರು ಆಸಕ್ತಿ ತೋರುವುದಾಗಿ ಹೇಳಿದ್ದಾರೆ’ ಎಂದು ಚಕ್ರವರ್ತಿ ನಿಕಟವರ್ತಿಯೊಬ್ಬರು ಪ್ರತಿಕ್ರಿಯಿಸಿದರು.</p>.<div><blockquote>ಪಕ್ಷ ಸ್ಪರ್ಧಿಸಲು ಅವಕಾಶ ನೀಡಿದರೆ ಸ್ವಾಗತಿಸುವೆ. ಅವಕಾಶ ನೀಡುವುದು ನಮ್ಮ ಅದೃಷ್ಟಕ್ಕೆ ಬಿಟ್ಟಿದ್ದು. </blockquote><span class="attribution">ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ನಾಯಕ</span></div>.<div><blockquote>ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರು ಶಿಫಾರಸ್ಸು ಆದ ಬಗ್ಗೆ ಮಾಹಿತಿ ಇದೆ. ಎಲ್ಲವೂ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು. </blockquote><span class="attribution">ಹರಿಪ್ರಕಾಶ ಕೋಣೆಮನೆ ವಕ್ತಾರ ಬಿಜೆಪಿ ರಾಜ್ಯ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಈ ಬಾರಿ ಯಾರನ್ನು ಕಣಕ್ಕೆ ಇಳಿಸಲಿದೆ ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಸತತ ಏಳು ಅವಧಿಯಿಂದ ಸ್ಪರ್ಧಿಸುತ್ತಿರುವ ಹಾಲಿ ಸಂಸದ ಅನಂತಕುಮಾರ ಹೆಗಡೆ ಅವರನ್ನು ವಿರೋಧದ ನಡುವೆಯೂ ಕಣಕ್ಕೆ ಇಳಿಸಲಾಗುವುದೇ? ಅಥವಾ ‘ಅಚ್ಚರಿ’ ಅಭ್ಯರ್ಥಿಗೆ ಅವಕಾಶ ಸಿಗುವುದೇ ಎಂಬ ಚರ್ಚೆ ನಡೆದಿದೆ.</p>.<p>ಅನಂತಕುಮಾರ ವಿರುದ್ಧ ಕ್ಷೇತ್ರದಲ್ಲಿ ಈ ಸಲ ಅಸಮಾಧಾನ ಹೆಚ್ಚಿದೆ. ಹೀಗಾಗಿ ಅವರನ್ನು ಕಣಕ್ಕಿಳಿಸುವ ಅನುಮಾನ ಒಂದೆಡೆಯಿದ್ದರೆ, ಪ್ರಾಯೋಗಿಕವಾಗಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಿಸಬಹುದು ಎಂಬ ಲೆಕ್ಕಾಚಾರವಿದೆ.</p>.<p>ಒಂದು ವೇಳೆ ಹೀಗೆ ಬೆಳವಣಿಗೆಗಳು ನಡೆದರೆ, ವಿಧಾನಸಭೆ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಹರಿಪ್ರಕಾಶ ಕೋಣೆಮನೆ ಅಥವಾ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪೈಕಿ ಒಬ್ಬರು ಕಣಕ್ಕಿಳಿಯಬಹುದು.</p>.<p>ವಿಶ್ವೇಶ್ವರ ಹೆಗಡೆ ಮತ್ತು ಹರಿಪ್ರಕಾಶ ಕೋಣೆಮನೆ ಕ್ಷೇತ್ರದಲ್ಲಿ ಓಡಾಡಿ ಕಾರ್ಯಕರ್ತರನ್ನು ಭೇಟಿಯಾದರೆ, ಚಕ್ರವರ್ತಿ ಸೂಲಿಬೆಲೆ ನಮೋ ಬ್ರಿಗೇಡ್ ಮೂಲಕ ಮೋದಿ ಸರ್ಕಾರದ ಸಾಧನೆ ಬಿಂಬಿಸುವ ಕಾರ್ಯಕ್ರಮ ನಡೆಸಿದ್ದಾರೆ.</p>.<p>‘ಸಂಸದ ಅನಂತಕುಮಾರ ಹೆಗಡೆ ಜನರಿಂದ ದೂರವಿದ್ದಾರೆ. ಚುನಾವಣೆ ಹೊಸ್ತಿಲಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಅವರಿಗೆ ಟಿಕೆಟ್ ನೀಡುವುದು ಅನುಮಾನ’ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಹೇಳಿದರು.</p>.<p>‘ಅನಂತಕುಮಾರ ಇಂತಹ ವಿರೋಧ ಎದುರಿಸಿದ್ದು ಇದು ಮೊದಲಲ್ಲ. ಈ ಹಿಂದೆಯೂ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತವಾಗಿತ್ತು. ಅವರನ್ನು ಅಭ್ಯರ್ಥಿಯಾಗಿಸುವ ಬಗ್ಗೆ ಆರ್ಎಸ್ಎಸ್ ಪ್ರಮುಖರ ಒಲವಿದೆ’ ಎಂದು ಸಂಸದರ ಆಪ್ತರೊಬ್ಬರು ತಿಳಿಸಿದರು.</p>.<p>‘ಅನಂತಕುಮಾರ ಅವರು ಸಕ್ರಿಯವಾಗಿರದ ಕಾರಣ ನನ್ನನ್ನೂ ಸೇರಿ ಹಲವರು ಸ್ಪರ್ಧೆಗೆ ಆಕಾಂಕ್ಷಿಯಾಗಿದ್ದೆವು. ಈಗ ಅವರು ಕ್ಷೇತ್ರದಲ್ಲಿ ಸುತ್ತಾಟ ಆರಂಭಿಸಿದ್ದರಿಂದ ಅವರೇ ಸ್ಪರ್ಧಿಸುವ ನಿರೀಕ್ಷೆ ಇದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದು ಕುತೂಹಲ ಹೆಚ್ಚಿಸಿದೆ.</p>.<p>‘ಚಕ್ರವರ್ತಿ ಸೂಲಿಬೆಲೆ ಅವರಿಗೆ ರಾಜಕೀಯವಾಗಿ ಆಸಕ್ತಿ ಇಲ್ಲ. ಈ ಬಾರಿ ಅವಕಾಶ ಹುಡುಕಿಕೊಂಡು ಬಂದರೆ ಸ್ಪರ್ಧೆಗೆ ಅವರು ಆಸಕ್ತಿ ತೋರುವುದಾಗಿ ಹೇಳಿದ್ದಾರೆ’ ಎಂದು ಚಕ್ರವರ್ತಿ ನಿಕಟವರ್ತಿಯೊಬ್ಬರು ಪ್ರತಿಕ್ರಿಯಿಸಿದರು.</p>.<div><blockquote>ಪಕ್ಷ ಸ್ಪರ್ಧಿಸಲು ಅವಕಾಶ ನೀಡಿದರೆ ಸ್ವಾಗತಿಸುವೆ. ಅವಕಾಶ ನೀಡುವುದು ನಮ್ಮ ಅದೃಷ್ಟಕ್ಕೆ ಬಿಟ್ಟಿದ್ದು. </blockquote><span class="attribution">ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ನಾಯಕ</span></div>.<div><blockquote>ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರು ಶಿಫಾರಸ್ಸು ಆದ ಬಗ್ಗೆ ಮಾಹಿತಿ ಇದೆ. ಎಲ್ಲವೂ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿದ್ದು. </blockquote><span class="attribution">ಹರಿಪ್ರಕಾಶ ಕೋಣೆಮನೆ ವಕ್ತಾರ ಬಿಜೆಪಿ ರಾಜ್ಯ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>