<p><strong>ಅಂಕೋಲಾ</strong>: ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ತುಂಬಿರುವ ಕಲ್ಲು ಮಣ್ಣುಗಳ ರಾಶಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ತಾಲ್ಲೂಕು ಘಟಕದಿಂದ ಶನಿವಾರ ತಹಶೀಲ್ದಾರ್ ಅನಂತ ಶಂಕರ ಬಿ. ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>‘ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ನಡುಗಡ್ಡೆಗಳಂತೆ ಮಣ್ಣಿನ ದಿಬ್ಬಗಳು ನಿರ್ಮಾಣವಾಗಿದ್ದು, ನದಿಯಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಸಣ್ಣ ಮಳೆ ಸುರಿದರೂ ಪ್ರವಾಹ ಭೀತಿ ಎದುರಾಗುತ್ತಿದೆ. ದಿಬ್ಬಗಳನ್ನು ಹಾಗೆಯೇ ಬಿಟ್ಟರೆ ಮಳೆಗೆ ಉಂಟಾಗುವ ನೆರೆಯಿಂದಾಗಿ ಸುಮಾರು 6 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾವಿರಾರು ಹೆಕ್ಟೇರ್ ಭತ್ತದ ಗದ್ದೆಗಳು ನಾಶವಾಗುವ ಸಂಭವ ಇದೆ’ ಎಂದು ದೂರಿದರು.</p>.<p>‘ಕೇರಳದ ಅರ್ಜುನ್ ಶೋಧಕ್ಕೆ ನೀಡಿರುವ ಮಹತ್ವವನ್ನು ಸ್ಥಳೀಯರ ಶೋಧಕ್ಕೆ ರಾಜ್ಯ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ನೀಡಿಲ್ಲ. ದುರ್ಘಟನೆಯಲ್ಲಿ ಕಣ್ಮರೆಯಾದ ಸ್ಥಳೀಯರ ಪತ್ತೆ ಕಾರ್ಯ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನದಿಯಲ್ಲಿ ತುಂಬಿರುವ ಮಣ್ಣು ತೆರವು ಮಾಡುವುದು ಸರ್ಕಾರ ಮತ್ತು ಜಿಲ್ಲಾಡಳಿತದ ಜವಾಬ್ದಾರಿಯಾಗಿದ್ದರೂ ಕಾರ್ಯಾಚರಣೆಯನ್ನು ಕೈ ಬಿಡಲಾಗಿದೆ. ಗಂಗಾವಳಿ ನದಿಯಲ್ಲಿ ತುಂಬಿರುವ ಮಣ್ಣು ತೆರುವು ಕಾರ್ಯಾಚರಣೆಗೆ ಕೂಡಲೇ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ರೈತ ಮೋರ್ಚಾ ಜಿಲ್ಲಾ ಘಟಕದ ಕಾರ್ಯದರ್ಶಿ ವಿ.ಎಸ್.ಭಟ್ಟ ಕಲ್ಲೇಶ್ವರ, ಪ್ರಮುಖರಾದ ಭಾಸ್ಕರ ನಾರ್ವೇಕರ್, ನಿತ್ಯಾನಂದ ಗಾಂವಕರ್, ರಾಮಚಂದ್ರ ಹೆಗಡೆ, ಬಿಂದೇಶ ನಾಯಕ, ಮಂಜುನಾಥ ಹೆಗಡೆ, ಆರತಿ ಗೌಡ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ತುಂಬಿರುವ ಕಲ್ಲು ಮಣ್ಣುಗಳ ರಾಶಿಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದ ತಾಲ್ಲೂಕು ಘಟಕದಿಂದ ಶನಿವಾರ ತಹಶೀಲ್ದಾರ್ ಅನಂತ ಶಂಕರ ಬಿ. ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>‘ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ನಡುಗಡ್ಡೆಗಳಂತೆ ಮಣ್ಣಿನ ದಿಬ್ಬಗಳು ನಿರ್ಮಾಣವಾಗಿದ್ದು, ನದಿಯಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಸಣ್ಣ ಮಳೆ ಸುರಿದರೂ ಪ್ರವಾಹ ಭೀತಿ ಎದುರಾಗುತ್ತಿದೆ. ದಿಬ್ಬಗಳನ್ನು ಹಾಗೆಯೇ ಬಿಟ್ಟರೆ ಮಳೆಗೆ ಉಂಟಾಗುವ ನೆರೆಯಿಂದಾಗಿ ಸುಮಾರು 6 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾವಿರಾರು ಹೆಕ್ಟೇರ್ ಭತ್ತದ ಗದ್ದೆಗಳು ನಾಶವಾಗುವ ಸಂಭವ ಇದೆ’ ಎಂದು ದೂರಿದರು.</p>.<p>‘ಕೇರಳದ ಅರ್ಜುನ್ ಶೋಧಕ್ಕೆ ನೀಡಿರುವ ಮಹತ್ವವನ್ನು ಸ್ಥಳೀಯರ ಶೋಧಕ್ಕೆ ರಾಜ್ಯ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ನೀಡಿಲ್ಲ. ದುರ್ಘಟನೆಯಲ್ಲಿ ಕಣ್ಮರೆಯಾದ ಸ್ಥಳೀಯರ ಪತ್ತೆ ಕಾರ್ಯ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನದಿಯಲ್ಲಿ ತುಂಬಿರುವ ಮಣ್ಣು ತೆರವು ಮಾಡುವುದು ಸರ್ಕಾರ ಮತ್ತು ಜಿಲ್ಲಾಡಳಿತದ ಜವಾಬ್ದಾರಿಯಾಗಿದ್ದರೂ ಕಾರ್ಯಾಚರಣೆಯನ್ನು ಕೈ ಬಿಡಲಾಗಿದೆ. ಗಂಗಾವಳಿ ನದಿಯಲ್ಲಿ ತುಂಬಿರುವ ಮಣ್ಣು ತೆರುವು ಕಾರ್ಯಾಚರಣೆಗೆ ಕೂಡಲೇ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ರೈತ ಮೋರ್ಚಾ ಜಿಲ್ಲಾ ಘಟಕದ ಕಾರ್ಯದರ್ಶಿ ವಿ.ಎಸ್.ಭಟ್ಟ ಕಲ್ಲೇಶ್ವರ, ಪ್ರಮುಖರಾದ ಭಾಸ್ಕರ ನಾರ್ವೇಕರ್, ನಿತ್ಯಾನಂದ ಗಾಂವಕರ್, ರಾಮಚಂದ್ರ ಹೆಗಡೆ, ಬಿಂದೇಶ ನಾಯಕ, ಮಂಜುನಾಥ ಹೆಗಡೆ, ಆರತಿ ಗೌಡ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>