<p><strong>ಕಾರವಾರ</strong>: ಇಲ್ಲಿನ ಕಾರವಾರ ಅರ್ಬನ್ ಕೋ–ಆಪ್ ಬ್ಯಾಂಕ್ನಲ್ಲಿ ಅಂದಾಜು ₹ 54 ಕೋಟಿಯಷ್ಟು ವಂಚನೆ ನಡೆದಿದ್ದು, ಎಂಟು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಗುರುದಾಸ ಬಾಂದೇಕರ ಎಂಬುವರು ಇದಕ್ಕೆ ಕಾರಣವೆಂದು ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಹಾಸ ಸ್ವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘2014 ರಿಂದಲೂ ಬ್ಯಾಂಕಿನ ನಿಯಮಾವಳಿಗೆ ವಿರುದ್ಧವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ಜಮಾ ಆಗಿದೆ. ಬಿಲ್ಡರ್, ಉದ್ಯಮಿಗಳು ಸೇರಿದಂತೆ ಹಲವರಿಗೆ ಬ್ಯಾಂಕ್ ನಿಯಮಾವಳಿ ಪಾಲಿಸದೆ ಹಣ ವರ್ಗಾಯಿಸಲಾಗಿದೆ. ಇದರಲ್ಲಿ ಪ್ರಧಾನ ವ್ಯವಸ್ಥಾಪಕ, ಶಾಖಾ ವ್ಯವಸ್ಥಾಪಕರು ಶಾಮೀಲಾಗಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>‘ಹತ್ತು ವರ್ಷಗಳ ಆಡಿಟ್ ವರದಿ ಸೇರಿದಂತೆ ಹಲವು ದಾಖಲೆಗಳನ್ನು ಬ್ಯಾಂಕ್ ಪೂರೈಸಬೇಕಿದೆ. ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಎಫ್.ಐ.ಆರ್ ದಾಖಲು ಮಾಡಿಕೊಳ್ಳಬೇಕಾಗುತ್ತದೆ’ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಇಲ್ಲಿನ ಕಾರವಾರ ಅರ್ಬನ್ ಕೋ–ಆಪ್ ಬ್ಯಾಂಕ್ನಲ್ಲಿ ಅಂದಾಜು ₹ 54 ಕೋಟಿಯಷ್ಟು ವಂಚನೆ ನಡೆದಿದ್ದು, ಎಂಟು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಗುರುದಾಸ ಬಾಂದೇಕರ ಎಂಬುವರು ಇದಕ್ಕೆ ಕಾರಣವೆಂದು ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಹಾಸ ಸ್ವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>‘2014 ರಿಂದಲೂ ಬ್ಯಾಂಕಿನ ನಿಯಮಾವಳಿಗೆ ವಿರುದ್ಧವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ಜಮಾ ಆಗಿದೆ. ಬಿಲ್ಡರ್, ಉದ್ಯಮಿಗಳು ಸೇರಿದಂತೆ ಹಲವರಿಗೆ ಬ್ಯಾಂಕ್ ನಿಯಮಾವಳಿ ಪಾಲಿಸದೆ ಹಣ ವರ್ಗಾಯಿಸಲಾಗಿದೆ. ಇದರಲ್ಲಿ ಪ್ರಧಾನ ವ್ಯವಸ್ಥಾಪಕ, ಶಾಖಾ ವ್ಯವಸ್ಥಾಪಕರು ಶಾಮೀಲಾಗಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>‘ಹತ್ತು ವರ್ಷಗಳ ಆಡಿಟ್ ವರದಿ ಸೇರಿದಂತೆ ಹಲವು ದಾಖಲೆಗಳನ್ನು ಬ್ಯಾಂಕ್ ಪೂರೈಸಬೇಕಿದೆ. ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಎಫ್.ಐ.ಆರ್ ದಾಖಲು ಮಾಡಿಕೊಳ್ಳಬೇಕಾಗುತ್ತದೆ’ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>