<p><strong>ಸಿದ್ದಾಪುರ(ಉತ್ತರ ಕನ್ನಡ ಜಿಲ್ಲೆ):</strong> ತಾಲ್ಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಆತ್ಮಸ್ಥೈರ್ಯ ಕುಸಿಯುವಂತೆ ಮಾಡಿದೆ. ಕೃಷಿ ಚಟುವಟಿಕೆಗೂ ಅಡ್ಡಿಯಾಗಿದೆ ಅಲ್ಲದೇ ಜಿಡ್ಡಿ ಭಾಗದ ಜನರು ಪೇಟೆಗೆ ಹೋಗಲು ಬೇಸರ ಪಡುವಂತಾಗಿದೆ.</p>.<p>ತಾಲ್ಲೂಕಿನಲ್ಲಿ ಒಂದೂವರೆ ತಿಂಗಳಲ್ಲಿ 43 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೊರ್ಲಕೈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 35, ಬಿಳಗಿ ವ್ಯಾಪ್ತಿಯಲ್ಲಿ 4, ಕೋಲಸಿರ್ಸಿ ವ್ಯಾಪ್ತಿಯಲ್ಲಿ 2, ಕ್ಯಾದಗಿ ಮತ್ತು ಹೇರೂರು ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿದೆ.</p>.<p>‘ಬೇಸಿಗೆಯಲ್ಲಿ ಬೆಟ್ಟ ಪ್ರದೇಶದಲ್ಲಿ ಬೀಳುವ ಒಣಗಿದ ಎಲೆ ಸಂಗ್ರಹಿಸಿ ತೋಟಕ್ಕೆ ಹಾಸಲಾಗುತ್ತದೆ. ಗೊಬ್ಬರ ಉತ್ಪಾದನೆಗೂ ಬಳಸಲಾಗುತ್ತದೆ. ಮಂಗನ ಕಾಯಿಲೆ ಕಾರಣಕ್ಕೆ ಆರೋಗ್ಯ ಇಲಾಖೆ ಬೆಟ್ಟ ಪ್ರದೇಶಕ್ಕೆ ತೆರಳದಂತೆ ನಿರ್ಬಂಧಿಸಿದೆ. ಇದರಿಂದ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿದೆ’ ಎಂದು ಜಿಡ್ಡಿ ಗ್ರಾಮಸ್ಥರು ತಿಳಿಸಿದರು.</p>.<p>‘ಗ್ರಾಮದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂಬ ಕಾರಣಕ್ಕೆ ಗ್ರಾಮಕ್ಕೆ ಹೊರಗಿನವರು ಬರಲು ಹಿಂಜರಿಯುತ್ತಾರೆ. ಮನೆಗಳಿಗೆ ಬಂಧುಗಳು ಬರುತ್ತಿಲ್ಲ. ಗ್ರಾಮದ ಜನರು ಹೊರ ಹೋದರೆ ಅಸ್ಪೃಶ್ಯರಂತೆ ಕಾಣುತ್ತಾರೆ. ಪೇಟೆಗೆ ಹೋದರೆ ಜನರು ನಮ್ಮಿಂದ ದೂರ ಸರಿಯುತ್ತಾರೆ. ಇದರಿಂದ ಬೇಸರವಾಗಿದೆ’ ಎಂದು ಅಳಲು ತೋಡಿಕೊಂಡರು.</p>.<p>‘ಸ್ವಲ್ಪ ಜಮೀನಿನಲ್ಲಿ ಬದುಕು ಕಟ್ಟಿಕೊಳ್ಳುವುದು ಕಷ್ಟ. ಗೊಬ್ಬರಕ್ಕೆ ಸೊಪ್ಪು, ತರಗೆಲೆ ತರುವುದು ನಿತ್ಯದ ಕೆಲಸ. ಪ್ರತಿ ವರ್ಷ ಗೊಬ್ಬರ ಮಾರಿ ₹ 70 ಸಾವಿರ ಆದಾಯ ಗಳಿಸುತ್ತಿದ್ದೆ. ಆದರೆ, ಈ ಸಲ ಬೆಟ್ಟಕ್ಕೆ ಹೋಗದಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಹೀಗಾದರೆ ಬದುಕು ಸಾಗಿಸುವುದು ಕಷ್ಟ’ ಎಂದು ಗ್ರಾಮಸ್ಥ ಗಣಪತಿ ಮಡಿವಾಳ ಬೇಸರ ವ್ಯಕ್ತಪಡಿಸಿದರು.</p>.<div><blockquote>ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನ ಸ್ವಲ್ಪ ದಿನ ಅರಣ್ಯ ಪ್ರದೇಶಕ್ಕೆ ಹೋಗದಂತೆ ಎಚ್ಚರ ವಹಿಸುವುದು ಅನಿವಾರ್ಯ.</blockquote><span class="attribution"> –ಡಾ.ನೀರಜ್ ಬಿ.ವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉತ್ತರ ಕನ್ನಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ(ಉತ್ತರ ಕನ್ನಡ ಜಿಲ್ಲೆ):</strong> ತಾಲ್ಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಹೆಚ್ಚಿದ್ದು, ಗ್ರಾಮಸ್ಥರಲ್ಲಿ ಆತ್ಮಸ್ಥೈರ್ಯ ಕುಸಿಯುವಂತೆ ಮಾಡಿದೆ. ಕೃಷಿ ಚಟುವಟಿಕೆಗೂ ಅಡ್ಡಿಯಾಗಿದೆ ಅಲ್ಲದೇ ಜಿಡ್ಡಿ ಭಾಗದ ಜನರು ಪೇಟೆಗೆ ಹೋಗಲು ಬೇಸರ ಪಡುವಂತಾಗಿದೆ.</p>.<p>ತಾಲ್ಲೂಕಿನಲ್ಲಿ ಒಂದೂವರೆ ತಿಂಗಳಲ್ಲಿ 43 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೊರ್ಲಕೈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 35, ಬಿಳಗಿ ವ್ಯಾಪ್ತಿಯಲ್ಲಿ 4, ಕೋಲಸಿರ್ಸಿ ವ್ಯಾಪ್ತಿಯಲ್ಲಿ 2, ಕ್ಯಾದಗಿ ಮತ್ತು ಹೇರೂರು ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿದೆ.</p>.<p>‘ಬೇಸಿಗೆಯಲ್ಲಿ ಬೆಟ್ಟ ಪ್ರದೇಶದಲ್ಲಿ ಬೀಳುವ ಒಣಗಿದ ಎಲೆ ಸಂಗ್ರಹಿಸಿ ತೋಟಕ್ಕೆ ಹಾಸಲಾಗುತ್ತದೆ. ಗೊಬ್ಬರ ಉತ್ಪಾದನೆಗೂ ಬಳಸಲಾಗುತ್ತದೆ. ಮಂಗನ ಕಾಯಿಲೆ ಕಾರಣಕ್ಕೆ ಆರೋಗ್ಯ ಇಲಾಖೆ ಬೆಟ್ಟ ಪ್ರದೇಶಕ್ಕೆ ತೆರಳದಂತೆ ನಿರ್ಬಂಧಿಸಿದೆ. ಇದರಿಂದ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಿದೆ’ ಎಂದು ಜಿಡ್ಡಿ ಗ್ರಾಮಸ್ಥರು ತಿಳಿಸಿದರು.</p>.<p>‘ಗ್ರಾಮದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂಬ ಕಾರಣಕ್ಕೆ ಗ್ರಾಮಕ್ಕೆ ಹೊರಗಿನವರು ಬರಲು ಹಿಂಜರಿಯುತ್ತಾರೆ. ಮನೆಗಳಿಗೆ ಬಂಧುಗಳು ಬರುತ್ತಿಲ್ಲ. ಗ್ರಾಮದ ಜನರು ಹೊರ ಹೋದರೆ ಅಸ್ಪೃಶ್ಯರಂತೆ ಕಾಣುತ್ತಾರೆ. ಪೇಟೆಗೆ ಹೋದರೆ ಜನರು ನಮ್ಮಿಂದ ದೂರ ಸರಿಯುತ್ತಾರೆ. ಇದರಿಂದ ಬೇಸರವಾಗಿದೆ’ ಎಂದು ಅಳಲು ತೋಡಿಕೊಂಡರು.</p>.<p>‘ಸ್ವಲ್ಪ ಜಮೀನಿನಲ್ಲಿ ಬದುಕು ಕಟ್ಟಿಕೊಳ್ಳುವುದು ಕಷ್ಟ. ಗೊಬ್ಬರಕ್ಕೆ ಸೊಪ್ಪು, ತರಗೆಲೆ ತರುವುದು ನಿತ್ಯದ ಕೆಲಸ. ಪ್ರತಿ ವರ್ಷ ಗೊಬ್ಬರ ಮಾರಿ ₹ 70 ಸಾವಿರ ಆದಾಯ ಗಳಿಸುತ್ತಿದ್ದೆ. ಆದರೆ, ಈ ಸಲ ಬೆಟ್ಟಕ್ಕೆ ಹೋಗದಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಹೀಗಾದರೆ ಬದುಕು ಸಾಗಿಸುವುದು ಕಷ್ಟ’ ಎಂದು ಗ್ರಾಮಸ್ಥ ಗಣಪತಿ ಮಡಿವಾಳ ಬೇಸರ ವ್ಯಕ್ತಪಡಿಸಿದರು.</p>.<div><blockquote>ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜನ ಸ್ವಲ್ಪ ದಿನ ಅರಣ್ಯ ಪ್ರದೇಶಕ್ಕೆ ಹೋಗದಂತೆ ಎಚ್ಚರ ವಹಿಸುವುದು ಅನಿವಾರ್ಯ.</blockquote><span class="attribution"> –ಡಾ.ನೀರಜ್ ಬಿ.ವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಉತ್ತರ ಕನ್ನಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>