‘ಅಧಿಕಾರಿಗಳೊಂದಿಗೆ ಮಳೆಗಾಲದ ಪೂರ್ವಭಾವಿ ಸಭೆ ನಡೆಸಿದ್ದೇನೆ. ಕೆ.ಪಿ.ಟಿ.ಸಿ.ಎಲ್, ಕೆ.ಪಿ.ಸಿ ಜತೆ ಸಭೆಯಾಗಿದೆ. ಕದ್ರಾ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಚತುಷ್ಪಥ ಹೆದ್ದಾರಿ ನಿರ್ಮಿಸುತ್ತಿರುವ ಐ.ಆರ್.ಬಿ ಕಂಪನಿಯು ಬೀದಿದೀಪ ಅಳವಡಿಕೆ, ತಂಗುದಾಣ ನಿರ್ಮಾಣದ ಭರವಸೆ ಈಡೇರಿಸಿಲ್ಲ. ಕಾಮಗಾರಿಯನ್ನೂ ಸರಿಯಾಗಿ ನಡೆಸುತ್ತಿಲ್ಲ’ ಎಂದು ದೂರಿದರು.