<p><strong>ದಾಂಡೇಲಿ:</strong> ಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರ, ಬಡವರ ವಿರೋಧಿ ನಿಲುವು ತಳೆದಿದ್ದು, ಶ್ರೀಮಂತರ ಪರವಾದ ನಿಲುವು ಹೊಂದಿದೆ ಎಂದು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯೆ ಮೀನಾಕ್ಷಿ ಸುಂದರಂ ಹೇಳಿದರು.</p>.<p>ಪಕ್ಷದ ನೇತೃತ್ವದಲ್ಲಿ ದಾಂಡೇಲಿಯ ಸಿಐಟಿಯು ಸಭಾ ಭವನದಲ್ಲಿ ಶನಿವಾರ ನಡೆದ ಶ್ರಮಜೀವಿಗಳ ಸಮಾವೇಶದಲ್ಲಿ ಮಾತನಾಡಿದರು.</p>.<p>ಖಾಸಗೀಕರಣದ ಮೂಲಕ ದುಡಿಯುವ ವರ್ಗದ ಜನರ ಬದುಕಿನ ಮೇಲೆ ಬರೆ ಎಳೆಯುತ್ತಿದೆ. ಉಳ್ಳವರ ಸಾಲಗಳನ್ನು ಮನ್ನಾ ಮಾಡಿ ಬಡವರಿಗೆ ಆರ್ಥಿಕ ಹೊರೆ ಮಾಡುತ್ತಿದೆ ಎಂದು ದೂರಿದರು.</p>.<p>ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮನಾ ಗಾಂವಕರ, ಪ್ರಜಾಸತ್ತಾತ್ಮಕ ವಿಚಾರಗಳನ್ನು ಹೊಂದಿರುವ ರಾಜಕೀಯ ಪಕ್ಷಕ್ಕೆ ಬೆಂಬಲ ನೀಡುವ ಅಗತ್ಯವಿದೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಸಂವಿಧಾನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಬೇಕಿದೆ ಎಂದರು.</p>.<p>ಪೌರ ಕಾರ್ಮಿಕರ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಸ್ಯಾಮಸನ್ ಮಾತನಾಡಿ, ನಮ್ಮ ಜಿಲ್ಲೆ ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಈ ಬಾರಿ ಈ ಕ್ಷೇತ್ರದ ಮತದಾರರು ಅಭಿವೃದ್ಧಿ ಪರವಾಗಿದ್ದು, ಕೋಮುಶಕ್ತಿಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದರು.</p>.<p>ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಎಂಪ್ಲಾಯಿಸ್ ಯೂನಿಯನ್ ನ ಸಲಿಂ ಸೈಯದ್, ಕರ್ನಾಟಕ ಪ್ರಾಂತ ರೈತ ಸಂಘದ ಪ್ರೇಮಾನಂದ ವೇಳೆಪ, ಸಿಐಟಿಯುನ ನಾಗಪ್ಪ ನಾಯ್ಕ, ಹನುಮಂತ್ ಸಿದ್ದುಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರ, ಬಡವರ ವಿರೋಧಿ ನಿಲುವು ತಳೆದಿದ್ದು, ಶ್ರೀಮಂತರ ಪರವಾದ ನಿಲುವು ಹೊಂದಿದೆ ಎಂದು ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯೆ ಮೀನಾಕ್ಷಿ ಸುಂದರಂ ಹೇಳಿದರು.</p>.<p>ಪಕ್ಷದ ನೇತೃತ್ವದಲ್ಲಿ ದಾಂಡೇಲಿಯ ಸಿಐಟಿಯು ಸಭಾ ಭವನದಲ್ಲಿ ಶನಿವಾರ ನಡೆದ ಶ್ರಮಜೀವಿಗಳ ಸಮಾವೇಶದಲ್ಲಿ ಮಾತನಾಡಿದರು.</p>.<p>ಖಾಸಗೀಕರಣದ ಮೂಲಕ ದುಡಿಯುವ ವರ್ಗದ ಜನರ ಬದುಕಿನ ಮೇಲೆ ಬರೆ ಎಳೆಯುತ್ತಿದೆ. ಉಳ್ಳವರ ಸಾಲಗಳನ್ನು ಮನ್ನಾ ಮಾಡಿ ಬಡವರಿಗೆ ಆರ್ಥಿಕ ಹೊರೆ ಮಾಡುತ್ತಿದೆ ಎಂದು ದೂರಿದರು.</p>.<p>ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮನಾ ಗಾಂವಕರ, ಪ್ರಜಾಸತ್ತಾತ್ಮಕ ವಿಚಾರಗಳನ್ನು ಹೊಂದಿರುವ ರಾಜಕೀಯ ಪಕ್ಷಕ್ಕೆ ಬೆಂಬಲ ನೀಡುವ ಅಗತ್ಯವಿದೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಸಂವಿಧಾನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಬೇಕಿದೆ ಎಂದರು.</p>.<p>ಪೌರ ಕಾರ್ಮಿಕರ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಸ್ಯಾಮಸನ್ ಮಾತನಾಡಿ, ನಮ್ಮ ಜಿಲ್ಲೆ ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಈ ಬಾರಿ ಈ ಕ್ಷೇತ್ರದ ಮತದಾರರು ಅಭಿವೃದ್ಧಿ ಪರವಾಗಿದ್ದು, ಕೋಮುಶಕ್ತಿಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದರು.</p>.<p>ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಎಂಪ್ಲಾಯಿಸ್ ಯೂನಿಯನ್ ನ ಸಲಿಂ ಸೈಯದ್, ಕರ್ನಾಟಕ ಪ್ರಾಂತ ರೈತ ಸಂಘದ ಪ್ರೇಮಾನಂದ ವೇಳೆಪ, ಸಿಐಟಿಯುನ ನಾಗಪ್ಪ ನಾಯ್ಕ, ಹನುಮಂತ್ ಸಿದ್ದುಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>