<p><strong>ಭಟ್ಕಳ:</strong> ಪಟ್ಟಣದ ತಮ್ಮ ಕಚೇರಿಯಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಭಾನುವಾರ ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆ ಆಲಿಸಿದರು.</p>.<p>ಸಭೆಗೆ ಆಗಮಿಸಿದ ಬಹುತೇಕ ಮಹಿಳೆಯರು ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳ್ಳದ ಕಾಮಗಾರಿ ಕಾರಣ ಕುಡಿಯುವ ನೀರು ಸಿಗುತ್ತಿಲ್ಲ. ಇದರಿಂದಾಗಿ ಕುಡಿಯುವ ನೀರಿಗಾಗಿ ಅಲೆದಾಡಬೇಕಾದ ಸ್ಥಿತಿ ಇದೆ ಎಂದು ಸಚಿವರ ಗಮನಕ್ಕೆ ತಂದರು.</p>.<p>ಸಮಸ್ಯೆ ಆಲಿಸಿದ ಸಚಿವರು ಶೀಘ್ರವೇ ಭಟ್ಕಳಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಲೇಜು ಶಿಕ್ಷಣ ಮುಂದುವರೆಸಲು ಹಣ ಇಲ್ಲಎಂದು ಸಚಿವರ ಮುಂದೆ ನಿವೇದಿಸಿಕೊಂಡ ಕೂಡಲೆ ಸ್ಪಂದಿಸಿದ ಸಚಿವರು ಅಗತ್ಯ ಇರುವ ಎಲ್ಲಾ ಶುಲ್ಕ ಭರಿಸುವುದಾಗಿ ತಿಳಿಸಿದರು.</p>.<p>ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದ ಚಿಕಿತ್ಸೆಗಾಗಿ ಸಹಾಯಧನ ಕೋರಿ ಬಂದವರಿಗೆ ವೈಯಕ್ತಿಕವಾಗಿ ಸಹಾಯಧನ ಮಾಡಿದ ಸಚಿವರು ಸರ್ಕಾರದಿಂದಲೂ ಸಹಾಯಧನ ಬಿಡುಗಡೆ ಮಾಡಿಸಿಕೊಡುವ ಭರವಸೆ ನೀಡಿದರು.</p>.<p>ಮುಂಡಳ್ಳಿ ಹಾಗೂ ಹೆಂಜಿಲ ಭಾಗಕ್ಕೆ ಬಸ್ ಬೀಡುವಂತೆ ನಾಗರಿಕರು ಆಗ್ರಹಿಸಿದರು. ವಸತಿ, ರಸ್ತೆ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜನರು ಸಚಿವರ ಗಮನಕ್ಕೆ ತಂದರು.</p>.<p>ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ ನಾಯ್ಕ, ಮುಖಂಡರಾದ ಗೋಪಾಲ ನಾಯ್ಕ, ರಾಜು ನಾಯ್ಕ, ಮಂಜಪ್ಪ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಪಟ್ಟಣದ ತಮ್ಮ ಕಚೇರಿಯಲ್ಲಿ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಭಾನುವಾರ ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆ ಆಲಿಸಿದರು.</p>.<p>ಸಭೆಗೆ ಆಗಮಿಸಿದ ಬಹುತೇಕ ಮಹಿಳೆಯರು ಜೆ.ಜೆ.ಎಂ ಕಾಮಗಾರಿ ಪೂರ್ಣಗೊಳ್ಳದ ಕಾಮಗಾರಿ ಕಾರಣ ಕುಡಿಯುವ ನೀರು ಸಿಗುತ್ತಿಲ್ಲ. ಇದರಿಂದಾಗಿ ಕುಡಿಯುವ ನೀರಿಗಾಗಿ ಅಲೆದಾಡಬೇಕಾದ ಸ್ಥಿತಿ ಇದೆ ಎಂದು ಸಚಿವರ ಗಮನಕ್ಕೆ ತಂದರು.</p>.<p>ಸಮಸ್ಯೆ ಆಲಿಸಿದ ಸಚಿವರು ಶೀಘ್ರವೇ ಭಟ್ಕಳಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾಲೇಜು ಶಿಕ್ಷಣ ಮುಂದುವರೆಸಲು ಹಣ ಇಲ್ಲಎಂದು ಸಚಿವರ ಮುಂದೆ ನಿವೇದಿಸಿಕೊಂಡ ಕೂಡಲೆ ಸ್ಪಂದಿಸಿದ ಸಚಿವರು ಅಗತ್ಯ ಇರುವ ಎಲ್ಲಾ ಶುಲ್ಕ ಭರಿಸುವುದಾಗಿ ತಿಳಿಸಿದರು.</p>.<p>ಗಂಭೀರ ಖಾಯಿಲೆಯಿಂದ ಬಳಲುತ್ತಿದ್ದ ಚಿಕಿತ್ಸೆಗಾಗಿ ಸಹಾಯಧನ ಕೋರಿ ಬಂದವರಿಗೆ ವೈಯಕ್ತಿಕವಾಗಿ ಸಹಾಯಧನ ಮಾಡಿದ ಸಚಿವರು ಸರ್ಕಾರದಿಂದಲೂ ಸಹಾಯಧನ ಬಿಡುಗಡೆ ಮಾಡಿಸಿಕೊಡುವ ಭರವಸೆ ನೀಡಿದರು.</p>.<p>ಮುಂಡಳ್ಳಿ ಹಾಗೂ ಹೆಂಜಿಲ ಭಾಗಕ್ಕೆ ಬಸ್ ಬೀಡುವಂತೆ ನಾಗರಿಕರು ಆಗ್ರಹಿಸಿದರು. ವಸತಿ, ರಸ್ತೆ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜನರು ಸಚಿವರ ಗಮನಕ್ಕೆ ತಂದರು.</p>.<p>ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುರೇಶ ನಾಯ್ಕ, ಮುಖಂಡರಾದ ಗೋಪಾಲ ನಾಯ್ಕ, ರಾಜು ನಾಯ್ಕ, ಮಂಜಪ್ಪ ನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>