<p>ಕಾರವಾರ: ತಾಲ್ಲೂಕಿನ ಶೇಜವಾಡದಲ್ಲಿ ನಾಲ್ಕು ವರ್ಷಗಳ ಹಿಂದೆಯೇ ನಿರ್ಮಾಣಗೊಂಡಿದ್ದರೂ ಈವರೆಗೆ ಬಳಕೆಯಾಗದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭಾನುವಾರ ಕೆ.ಎಂ.ಸಿ.ಎ ಅಧ್ಯಕ್ಷರೂ ಆಗಿರುವ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ದಾರಿ ಇಲ್ಲದ ಜಾಗಕ್ಕೆ ಹಾಸ್ಟೆಲ್ ಕಟ್ಟಿದರು!’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಫೆ.27 ರಂದು ವರದಿ ಪ್ರಕಟಿಸಿತ್ತು. ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡವು ಬಳಕೆಯಾಗದೆ ಗಿಡಗಂಟಿ ಬೆಳೆದುಕೊಂಡಿದ್ದಲ್ಲದೆ, ವಸತಿ ನಿಲಯಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದ ಸಮಸ್ಯೆ ಬಗ್ಗೆ ಗಮನಸೆಳೆಯಲಾಗಿತ್ತು.</p>.<p>ವಸತಿ ನಿಲಯದ ಆವರಣದಲ್ಲಿ ಬೆಳೆದುಕೊಂಡಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಕಟ್ಟಡದಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ, ಜಿಲ್ಲಾಧಿಕಾರಿ ಭೇಟಿ ನೀಡಿ ಕಟ್ಟಡದ ಸದ್ಯದ ಸ್ಥಿತಿಗತಿ ಪರಿಶೀಲಿಸಿದರು.</p>.<p>‘ವಸತಿ ನಿಲಯಕ್ಕೆ ನೀರು, ವಿದ್ಯುತ್ ಸಂಪರ್ಕದ ವ್ಯವಸ್ಥೆ ಆಗಬೇಕಿದೆ. ಈ ಸೌಲಭ್ಯ ಕಲ್ಪಿಸಲು ಅನುದಾನ ಲಭ್ಯವಿದ್ದು ಕಾಮಗಾರಿಗೆ ಅನುಮೋದನೆ ನೀಡಲಾಗುವುದು. ರಸ್ತೆ ಸಂಪರ್ಕಕ್ಕೆ ಸುಮಾರು ₹30 ಲಕ್ಷ ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದು ಶಾಸಕರ ವಿಶೇಷ ಅನುದಾನಕ್ಕೆ ಕೋರಲಾಗಿದೆ. ಎಲ್ಲ ಸೌಲಭ್ಯ ಕಲ್ಪಿಸಿ ಮುಂಬರುವ ಶೈಕ್ಷಣಿಕ ವರ್ಷದ ಒಳಗೆ ವಸತಿ ನಿಲಯ ಕಾರ್ಯಾರಂಭಕ್ಕೆ ಕ್ರಮ ವಹಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರತಿಕ್ರಿಯಿಸಿದರು.</p>.<p>‘ವಸತಿ ನಿಲಯಕ್ಕೆ ಸಂಪರ್ಕಿಸಲು ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಒದಗಿಸಲಾಗುವುದು’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ವಸತಿ ನಿಲಯಕ್ಕೆ ಉಪಲೋಕಾಯುಕ್ತ ಎಸ್.ಎನ್.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ತಾಲ್ಲೂಕಿನ ಶೇಜವಾಡದಲ್ಲಿ ನಾಲ್ಕು ವರ್ಷಗಳ ಹಿಂದೆಯೇ ನಿರ್ಮಾಣಗೊಂಡಿದ್ದರೂ ಈವರೆಗೆ ಬಳಕೆಯಾಗದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭಾನುವಾರ ಕೆ.ಎಂ.ಸಿ.ಎ ಅಧ್ಯಕ್ಷರೂ ಆಗಿರುವ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ದಾರಿ ಇಲ್ಲದ ಜಾಗಕ್ಕೆ ಹಾಸ್ಟೆಲ್ ಕಟ್ಟಿದರು!’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಫೆ.27 ರಂದು ವರದಿ ಪ್ರಕಟಿಸಿತ್ತು. ಸುಮಾರು ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಟ್ಟಡವು ಬಳಕೆಯಾಗದೆ ಗಿಡಗಂಟಿ ಬೆಳೆದುಕೊಂಡಿದ್ದಲ್ಲದೆ, ವಸತಿ ನಿಲಯಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದ ಸಮಸ್ಯೆ ಬಗ್ಗೆ ಗಮನಸೆಳೆಯಲಾಗಿತ್ತು.</p>.<p>ವಸತಿ ನಿಲಯದ ಆವರಣದಲ್ಲಿ ಬೆಳೆದುಕೊಂಡಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವ ಜತೆಗೆ ಕಟ್ಟಡದಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ, ಜಿಲ್ಲಾಧಿಕಾರಿ ಭೇಟಿ ನೀಡಿ ಕಟ್ಟಡದ ಸದ್ಯದ ಸ್ಥಿತಿಗತಿ ಪರಿಶೀಲಿಸಿದರು.</p>.<p>‘ವಸತಿ ನಿಲಯಕ್ಕೆ ನೀರು, ವಿದ್ಯುತ್ ಸಂಪರ್ಕದ ವ್ಯವಸ್ಥೆ ಆಗಬೇಕಿದೆ. ಈ ಸೌಲಭ್ಯ ಕಲ್ಪಿಸಲು ಅನುದಾನ ಲಭ್ಯವಿದ್ದು ಕಾಮಗಾರಿಗೆ ಅನುಮೋದನೆ ನೀಡಲಾಗುವುದು. ರಸ್ತೆ ಸಂಪರ್ಕಕ್ಕೆ ಸುಮಾರು ₹30 ಲಕ್ಷ ವೆಚ್ಚದಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿದ್ದು ಶಾಸಕರ ವಿಶೇಷ ಅನುದಾನಕ್ಕೆ ಕೋರಲಾಗಿದೆ. ಎಲ್ಲ ಸೌಲಭ್ಯ ಕಲ್ಪಿಸಿ ಮುಂಬರುವ ಶೈಕ್ಷಣಿಕ ವರ್ಷದ ಒಳಗೆ ವಸತಿ ನಿಲಯ ಕಾರ್ಯಾರಂಭಕ್ಕೆ ಕ್ರಮ ವಹಿಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರತಿಕ್ರಿಯಿಸಿದರು.</p>.<p>‘ವಸತಿ ನಿಲಯಕ್ಕೆ ಸಂಪರ್ಕಿಸಲು ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಒದಗಿಸಲಾಗುವುದು’ ಎಂದು ಶಾಸಕ ಸತೀಶ ಸೈಲ್ ಹೇಳಿದರು.</p>.<p>ವಸತಿ ನಿಲಯಕ್ಕೆ ಉಪಲೋಕಾಯುಕ್ತ ಎಸ್.ಎನ್.ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>