<p><strong>ಭಟ್ಕಳ:</strong> ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಮತ್ತು ನುಡಿದಂತೆ ನಡೆಯುವ ಪಕ್ಷ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದ ಗೋಷ್ಟಿಯಲ್ಲಿ ಅವರು ಮಾತನಾಡಿದರು.</p>.<p>ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ನುಡಿದಂತೆ ನಡೆಯುವಲ್ಲಿ ವಿಫಲವಾಗಿದೆ. ಕೊಟ್ಟ ಭರವಸೆಯಂತೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಯಾವುದೇ ಯೋಜನೆ ಜ್ಯಾರಿಗೆ ತಂದಿಲ್ಲ. ಕಪ್ಪು ಹಣ ತರಲೂ ಇವರಿಂದ ಆಗಿಲ್ಲ ಎಂದರು.</p>.<p>ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಕೇಂದ್ರದಲ್ಲಿ 10 ವರ್ಷ ಆಡಳಿತ ನಡೆಸಿದ ಬಿಜೆಪಿ ನುಡಿದಂತೆ ನಡೆದಿಲ್ಲ. ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದ ₹20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿಗೆ ಹೋಯಿತು? ಇದರಿಂದ ಯಾರಿಗೆ ಲಾಭ ಆಯಿತು ಎಂದು ಪ್ರಶ್ನಿಸಿದರು.</p>.<p>ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಅವಕಾಶ ಇದ್ದು, ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಗೆಲ್ಲುವುದು ಖಚಿತ ಎಂದರು.</p>.<p>ದಕ್ಷಿಣ ಕನ್ನಡ ಕಾಂಗ್ರೆಸ್ ಪ್ರಮುಖರಾದ ಶಶಿಧರ ಹೆಗಡೆ, ಅಶ್ರಫ್, ನವೀನ್ ಡಿಸೋಜ, ಕೆಪಿಸಿಸಿ ಸದಸ್ಯೆ ಸರಸ್ವತಿ ಕಾಮತ್, ಬೀಬಿ ಕುಂದರ್, ರಮನಾಥ ಪೂಜಾರಿ, ಶಬ್ಬೀರ್, ಸುಲೇಮಾನ್, ನಾಗೇಂದ್ರ ಮುಂತಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರ ಮತ್ತು ನುಡಿದಂತೆ ನಡೆಯುವ ಪಕ್ಷ ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದರು.</p>.<p>ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದ ಗೋಷ್ಟಿಯಲ್ಲಿ ಅವರು ಮಾತನಾಡಿದರು.</p>.<p>ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ನುಡಿದಂತೆ ನಡೆಯುವಲ್ಲಿ ವಿಫಲವಾಗಿದೆ. ಕೊಟ್ಟ ಭರವಸೆಯಂತೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಯಾವುದೇ ಯೋಜನೆ ಜ್ಯಾರಿಗೆ ತಂದಿಲ್ಲ. ಕಪ್ಪು ಹಣ ತರಲೂ ಇವರಿಂದ ಆಗಿಲ್ಲ ಎಂದರು.</p>.<p>ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದು ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಕೇಂದ್ರದಲ್ಲಿ 10 ವರ್ಷ ಆಡಳಿತ ನಡೆಸಿದ ಬಿಜೆಪಿ ನುಡಿದಂತೆ ನಡೆದಿಲ್ಲ. ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ಘೋಷಿಸಿದ ₹20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿಗೆ ಹೋಯಿತು? ಇದರಿಂದ ಯಾರಿಗೆ ಲಾಭ ಆಯಿತು ಎಂದು ಪ್ರಶ್ನಿಸಿದರು.</p>.<p>ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಅವಕಾಶ ಇದ್ದು, ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಗೆಲ್ಲುವುದು ಖಚಿತ ಎಂದರು.</p>.<p>ದಕ್ಷಿಣ ಕನ್ನಡ ಕಾಂಗ್ರೆಸ್ ಪ್ರಮುಖರಾದ ಶಶಿಧರ ಹೆಗಡೆ, ಅಶ್ರಫ್, ನವೀನ್ ಡಿಸೋಜ, ಕೆಪಿಸಿಸಿ ಸದಸ್ಯೆ ಸರಸ್ವತಿ ಕಾಮತ್, ಬೀಬಿ ಕುಂದರ್, ರಮನಾಥ ಪೂಜಾರಿ, ಶಬ್ಬೀರ್, ಸುಲೇಮಾನ್, ನಾಗೇಂದ್ರ ಮುಂತಾದವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>