ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರೂರು ಗುಡ್ಡ ಕುಸಿತ | ನೀರಿನಾಳದಲ್ಲಿ ಹುಡುಕಾಟ: ಸೇನೆಗೆ ಸವಾಲು

ಉನ್ನತ ತಂತ್ರಜ್ಞಾನದ ರೆಡಾರ್ ತರಲು ನಿರ್ಧಾರ
Published : 23 ಜುಲೈ 2024, 16:23 IST
Last Updated : 23 ಜುಲೈ 2024, 16:23 IST
ಫಾಲೋ ಮಾಡಿ
Comments
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಗುಡ್ಡ ಕುಸಿತದಿಂದ ಕಾಣೆಯಾದ ಜನರು ಮತ್ತು ಲಾರಿಗಾಗಿ ಮಂಗಳವಾರ ಶೋಧ ನಡೆಯಿತು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಗುಡ್ಡ ಕುಸಿತದಿಂದ ಕಾಣೆಯಾದ ಜನರು ಮತ್ತು ಲಾರಿಗಾಗಿ ಮಂಗಳವಾರ ಶೋಧ ನಡೆಯಿತು
8ಕ್ಕೆ ಏರಿದ ಸಾವಿನ ಸಂಖ್ಯೆ
ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗೋಕರ್ಣ ಸಮೀಪದ ಗಂಗೆಕೊಳ್ಳದಲ್ಲಿ ಮಂಗಳವಾರ ನಸುಕಿನ ಜಾವ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಉಂಟಾದ ಪ್ರವಾಹದಿಂದ ಕಾಣೆಯಾಗಿದ್ದ ಉಳುವರೆ ಗ್ರಾಮದ ಸಣ್ಣಿ ಹನುಮಂತಗೌಡ ಅವರ ಮೃತದೇಹ ಎಂದು ಗುರುತಿಸಲಾಗಿದೆ. ‘ಬಳೆ ಗುರುತು ಆಧರಿಸಿ ಸಣ್ಣಿ ಅವರದ್ದೇ ಮೃತದೇಹ ಎಂದು ಗುರುತಿಸಲಾಗಿದೆ. ಇದರೊಂದಿಗೆ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರವಾಹ ಭೀತಿ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಸಿನ ಮಳೆಯಾಗಿದ್ದು ಹೊನ್ನಾವರ ತಾಲ್ಲೂಕಿನ ಗುಂಡಬಾಳ ನದಿ ದಂಡೆ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರಾವಳಿ ಪ್ರದೇಶದಲ್ಲಿ ಆಗಾಗ ಬಿರುಸಿನ ಮಳೆಯಾದರೂ ಘಟ್ಟದ ಮೇಲಿನ ಭಾಗದಲ್ಲಿ ವ್ಯಾಪಕ ಮಳೆ ಸುರಿದಿದ್ದರಿಂದ ಅಘನಾಶಿನಿ ಗಂಗಾವಳಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಜೊಯಿಡಾದಲ್ಲಿ ಗಾಳಿ ಸಹಿತ ಅಬ್ಬರದ ಮಳೆ ಸುರಿದಿದ್ದು ಗ್ರಾಮೀಣ ಭಾಗದ ಕೆಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT