<p><strong>ಶಿರಸಿ:</strong> ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರದ ಬೆಳೆ ವಿಮೆ ವ್ಯಾಪ್ತಿಗೆ ಒಳಪಟ್ಟ 79,197 ಪ್ರಸ್ತಾವಗಳಿಗೆ ಒಟ್ಟೂ ₹ 78.39 ಕೋಟಿ ವಿಮಾ ಪರಿಹಾರ ಘೋಷಣೆ ಆಗಿದ್ದು, ಆಧಾರ್ ಲಿಂಕ್ ಆದ ರೈತರ ಉಳಿತಾಯ ಖಾತೆಗಳಿಗೆ ಜಮಾ ಆಗುತ್ತಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.</p>.<p>ಈ ಕುರಿತು ಶುಕ್ರವಾರ ಮಾಹಿತಿ ನೀಡಿರುವ ಅವರು, ‘ಶಿರಸಿ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ಸರಾಸರಿ ₹ 414.66ರಂತೆ ₹ 29.57 ಕೋಟಿ, ಸಿದ್ದಾಪುರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 428.60ರಂತೆ ₹ 13.48 ಕೋಟಿ, ಮುಂಡಗೋಡ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 625.93ರಂತೆ ₹ 9.26 ಕೋಟಿ, ಯಲ್ಲಾಪುರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 458.88ರಂತೆ ₹ 16.78 ಕೋಟಿ, ಜೊಯಿಡಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 269.75ರಂತೆ ₹ 1.31 ಕೋಟಿ, ಅಂಕೋಲಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 471.96 <br>ರಂತೆ ₹ 4.62 ಕೋಟಿ, ಕುಮಟಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 191.73ರಂತೆ ₹ 52.82 ಲಕ್ಷ, ಹೊನ್ನಾವರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 190.17ರಂತೆ ₹ 1.76 ಕೋಟಿ, ಭಟ್ಕಳ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 335.56ರಂತೆ ₹ 1.06 ಕೋಟಿ ಪರಿಹಾರ ದೊರಕಿದೆ. ಹಳಿಯಾಳ ಮತ್ತು ಕಾರವಾರ ತಾಲ್ಲೂಕುಗಳಿಗೆ ಪರಿಹಾರ ದೊರೆತಿಲ್ಲ. ಮುಂದಿನ ಕಂತಿನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.</p>.<p>ಅಡಿಕೆ ಬೆಳೆಗೆ 75,776 ಪ್ರಸ್ತಾವಗಳಿಗೆ ₹ 77.18 ಕೋಟಿ ವಿಮೆ ಪರಿಹಾರ ದೊರಕಿದ್ದು, ಕಾಳುಮೆಣಸು ಬೆಳೆಗೆ ಸಂಬಂಧಿಸಿ 3,421 ಪ್ರಸ್ತಾವಗಳಿಗೆ ₹ 1.21 ಕೋಟಿ ವಿಮೆ ಪರಿಹಾರ ದೊರಕಿದೆ. ಮಳೆ ಕೊರತೆಯಿಂದ ಬರಗಾಲದ ಸಂಕಷ್ಟದಲ್ಲಿರುವ ರೈತಾಪಿ ವರ್ಗಕ್ಕೆ ಬೆಳೆ ವಿಮಾ ಯೋಜನೆಯ ಪರಿಹಾರವು ಜಮೆ ಆಗಿರುವುದು ವರದಾನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅಳವಡಿಸಿಕೊಂಡು 2022-23ನೇ ಸಾಲಿನ ಹಂಗಾಮಿಗೆ ಸಂಬಂಧಿಸಿ ಬೆಳೆ ವಿಮೆ ರಖಂ ರೈತರಿಗೆ ಸಕಾಲದಲ್ಲಿ ದೊರೆತಿರುವುದು ಕೆ.ಡಿ.ಸಿ.ಸಿ. ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಗಲಿರುಳು ಶ್ರಮಿಸಿರುವುದರ ಫಲಶೃತಿಯಾಗಿದೆ. ರೈತರ ಆರ್ಥಿಕ ಅಭಿವೃದ್ಧಿಗೆ ಸ್ಪಂದಿಸಲು ಬ್ಯಾಂಕ್ ಸದಾ ಸಿದ್ಧ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರದ ಬೆಳೆ ವಿಮೆ ವ್ಯಾಪ್ತಿಗೆ ಒಳಪಟ್ಟ 79,197 ಪ್ರಸ್ತಾವಗಳಿಗೆ ಒಟ್ಟೂ ₹ 78.39 ಕೋಟಿ ವಿಮಾ ಪರಿಹಾರ ಘೋಷಣೆ ಆಗಿದ್ದು, ಆಧಾರ್ ಲಿಂಕ್ ಆದ ರೈತರ ಉಳಿತಾಯ ಖಾತೆಗಳಿಗೆ ಜಮಾ ಆಗುತ್ತಿದೆ ಎಂದು ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.</p>.<p>ಈ ಕುರಿತು ಶುಕ್ರವಾರ ಮಾಹಿತಿ ನೀಡಿರುವ ಅವರು, ‘ಶಿರಸಿ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ಸರಾಸರಿ ₹ 414.66ರಂತೆ ₹ 29.57 ಕೋಟಿ, ಸಿದ್ದಾಪುರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 428.60ರಂತೆ ₹ 13.48 ಕೋಟಿ, ಮುಂಡಗೋಡ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 625.93ರಂತೆ ₹ 9.26 ಕೋಟಿ, ಯಲ್ಲಾಪುರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 458.88ರಂತೆ ₹ 16.78 ಕೋಟಿ, ಜೊಯಿಡಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 269.75ರಂತೆ ₹ 1.31 ಕೋಟಿ, ಅಂಕೋಲಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 471.96 <br>ರಂತೆ ₹ 4.62 ಕೋಟಿ, ಕುಮಟಾ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 191.73ರಂತೆ ₹ 52.82 ಲಕ್ಷ, ಹೊನ್ನಾವರ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 190.17ರಂತೆ ₹ 1.76 ಕೋಟಿ, ಭಟ್ಕಳ ತಾಲ್ಲೂಕಿನಲ್ಲಿ ಪ್ರತಿ ಗುಂಟೆಗೆ ₹ 335.56ರಂತೆ ₹ 1.06 ಕೋಟಿ ಪರಿಹಾರ ದೊರಕಿದೆ. ಹಳಿಯಾಳ ಮತ್ತು ಕಾರವಾರ ತಾಲ್ಲೂಕುಗಳಿಗೆ ಪರಿಹಾರ ದೊರೆತಿಲ್ಲ. ಮುಂದಿನ ಕಂತಿನಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.</p>.<p>ಅಡಿಕೆ ಬೆಳೆಗೆ 75,776 ಪ್ರಸ್ತಾವಗಳಿಗೆ ₹ 77.18 ಕೋಟಿ ವಿಮೆ ಪರಿಹಾರ ದೊರಕಿದ್ದು, ಕಾಳುಮೆಣಸು ಬೆಳೆಗೆ ಸಂಬಂಧಿಸಿ 3,421 ಪ್ರಸ್ತಾವಗಳಿಗೆ ₹ 1.21 ಕೋಟಿ ವಿಮೆ ಪರಿಹಾರ ದೊರಕಿದೆ. ಮಳೆ ಕೊರತೆಯಿಂದ ಬರಗಾಲದ ಸಂಕಷ್ಟದಲ್ಲಿರುವ ರೈತಾಪಿ ವರ್ಗಕ್ಕೆ ಬೆಳೆ ವಿಮಾ ಯೋಜನೆಯ ಪರಿಹಾರವು ಜಮೆ ಆಗಿರುವುದು ವರದಾನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅಳವಡಿಸಿಕೊಂಡು 2022-23ನೇ ಸಾಲಿನ ಹಂಗಾಮಿಗೆ ಸಂಬಂಧಿಸಿ ಬೆಳೆ ವಿಮೆ ರಖಂ ರೈತರಿಗೆ ಸಕಾಲದಲ್ಲಿ ದೊರೆತಿರುವುದು ಕೆ.ಡಿ.ಸಿ.ಸಿ. ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಗಲಿರುಳು ಶ್ರಮಿಸಿರುವುದರ ಫಲಶೃತಿಯಾಗಿದೆ. ರೈತರ ಆರ್ಥಿಕ ಅಭಿವೃದ್ಧಿಗೆ ಸ್ಪಂದಿಸಲು ಬ್ಯಾಂಕ್ ಸದಾ ಸಿದ್ಧ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>