ಅದರಲ್ಲಿ ಬೆಂಗಳೂರಿನ ಪೀಣ್ಯದ ವಿಳಾಸ ಪತ್ತೆಯಾಯಿತು. ಈ ವಿಳಾಸಕ್ಕೆ ಸಂಪರ್ಕಿಸಿದ ಗೋಕರ್ಣ ಪೊಲೀಸರು ಅವರ ಹೆಂಡತಿ ಮತ್ತು ಮಕ್ಕಳಿಗೆ ರಮೇಶ ಮೃತಪಟ್ಟ ಸುದ್ದಿ ತಿಳಿಸಿದ್ದಾರೆ. ಈ ಮಧ್ಯೆ ರಮೇಶ ಮಾಕತ್ಕರ್ ಬೆಂಗಳೂರಿನಲ್ಲಿ ಗಾರ್ಮೆಂಟ್ ಉದ್ಯೋಗ ನಡೆಸುತ್ತಿದ್ದರು. ಅಲ್ಲಿ ನಷ್ಟವಾಗಿ 10 ವರ್ಷದ ಹಿಂದೆ ಮನೆ ಬಿಟ್ಟು ಬಂದಿದ್ದರು. ಹೆಂಡತಿ ಮಕ್ಕಳು ಎಷ್ಟು ಹುಡುಕಿದರೂ ಪತ್ತೆಮಾಡಲು ಸಾಧ್ಯವಾಗಿಲ್ಲವಾಗಿತ್ತು. ಇವರ ಬಗ್ಗೆ ಮಾಹಿತಿ ತಿಳಿದ ಹೆಂಡತಿ, ಮಕ್ಕಳು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ.