<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶದ ಗುಂಡಾ ಸಸ್ಯೋದ್ಯಾನ ಬಳಿಯ ರಾಷ್ಟ್ರೀಯ ಹೆದ್ದಾರಿ -50ರ ಬದಿಯಲ್ಲಿ ನಿರ್ಮಿಸಿದ ತಡೆಗೋಡೆಗೆ ಗುರುವಾರ ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದುದಿಂದ ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.</p><p>ಇಳಕಲ್ ತಾಲ್ಲೂಕಿನ ಶಶಿಕಾಂತ್ ಪೊಲೀಸ್ ಪಾಟೀಲ್ (26) ಹಾಗೂ ಜಗದೀಶ್ ಗುರಿಕಾರ್ (26) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಇಬ್ಬರು ಬೆಂಗಳೂರಿನಿಂದ ಇಳಕಲ್ಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.</p><p>ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತಡೆಗೋಡೆ ಆಚೆಯ ಹಿನ್ನೀರು ಪ್ರದೇಶದಲ್ಲಿ ಬಿದ್ದಿದ್ದಾರೆ. ಜಗದೀಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡ ಶಶಿಕಾಂತ್ ಅವರು ಬಳ್ಳಾರಿಯ ವಿಮ್ಸ್ ನಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶದ ಗುಂಡಾ ಸಸ್ಯೋದ್ಯಾನ ಬಳಿಯ ರಾಷ್ಟ್ರೀಯ ಹೆದ್ದಾರಿ -50ರ ಬದಿಯಲ್ಲಿ ನಿರ್ಮಿಸಿದ ತಡೆಗೋಡೆಗೆ ಗುರುವಾರ ಬೆಳಿಗ್ಗೆ ಬೈಕ್ ಡಿಕ್ಕಿ ಹೊಡೆದುದಿಂದ ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ಮೃತಪಟ್ಟಿದ್ದಾರೆ.</p><p>ಇಳಕಲ್ ತಾಲ್ಲೂಕಿನ ಶಶಿಕಾಂತ್ ಪೊಲೀಸ್ ಪಾಟೀಲ್ (26) ಹಾಗೂ ಜಗದೀಶ್ ಗುರಿಕಾರ್ (26) ಮೃತಪಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಇಬ್ಬರು ಬೆಂಗಳೂರಿನಿಂದ ಇಳಕಲ್ಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.</p><p>ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ತಡೆಗೋಡೆ ಆಚೆಯ ಹಿನ್ನೀರು ಪ್ರದೇಶದಲ್ಲಿ ಬಿದ್ದಿದ್ದಾರೆ. ಜಗದೀಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡ ಶಶಿಕಾಂತ್ ಅವರು ಬಳ್ಳಾರಿಯ ವಿಮ್ಸ್ ನಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>