<p><strong>ಹೊಸಪೇಟೆ (ವಿಜಯನಗರ): ‘</strong>2,500 ವರ್ಷಗಳ ಹಿಂದೆಯೇ ಗೌತಮ ಬುದ್ಧರು ಈ ನೆಲದಲ್ಲಿ ಜೀವಂತವಾಗಿದ್ದ ಅಸಮಾನತೆ, ಜಾತೀಯತೆ, ಅಸ್ಪೃಶ್ಯತೆಯನ್ನು ಖಂಡಿಸಿದ್ದರು ಎಂದರೆ ಇಂದಿಗೂ ಜೀವಂತವಿರುವ ಈ ಎಲ್ಲವುಗಳ ಸೃಷ್ಟಿಕರ್ತರು ಯಾರೆಂಬುದನ್ನು ತಿಳಿದುಕೊಳ್ಳಬೇಕು’ ಎಂದು ಹಂಪಿ ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷ ಹಾಗೂ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಹೇಳಿದರು.</p>.<p>ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಟ್ರಸ್ಟ್ ಮತ್ತು ವಿಜಯನಗರ ಜಿಲ್ಲಾ ಬಾಬಾಸಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸಂಘದ ನೇತೃತ್ವದಲ್ಲಿ ಆಚರಿಸಿದ ಬುದ್ಧ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ನಾವೆಲ್ಲರೂ ಇನ್ನೂ ಸಹ ಸಿದ್ದಾರ್ಥರಾಗುತ್ತಿದ್ದೇವೆಯೇ ಹೊರತು (ಸ್ಥಾವರ - ದೇವಾಲಯಗಳು) ಗೌತಮ ಬುದ್ಧರಾಗುತ್ತಿಲ್ಲ (ಜಂಗಮ- ಜ್ಞಾನವಂತರು)’ ಎಂದರು.</p>.<p>ಸಾಹಿತಿ ಪೀರ್ ಪಾಷಾ ಮಾತನಾಡಿ, ಪ್ರೀತಿಯ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬ ವಿಶ್ವಾಸವನ್ನು ಬುದ್ಧನ ತತ್ವ ಸಾರುತ್ತದೆ ಎಂದರು.</p>.<p>ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್ ಕಾರ್ಯದರ್ಶಿ ಸೋಮಶೇಖರ್ ಬಣ್ಣದಮನೆ ಮಾತನಾಡಿ, ‘ನಾವ್ಯಾರೂ ಧರ್ಮ ದ್ರೋಹಿಗಳಲ್ಲ ನಮ್ಮ ಧರ್ಮಕ್ಕೆ ದ್ರೋಹ ಬಗೆದವರ ವಿರುದ್ಧ ನಾವು ಬೌದ್ಧಿಕ ಹೋರಾಟ ಮಾಡಬೇಕಾಗಿದೆ’ ಎಂದರು.</p>.<p>ನಿಂಬಗಲ್ ರಾಮಕೃಷ್ಣ, ಸಣ್ಣ ಮಾರೆಪ್ಪ, ಕಾರಿಗನೂರು ಯರ್ರಿಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): ‘</strong>2,500 ವರ್ಷಗಳ ಹಿಂದೆಯೇ ಗೌತಮ ಬುದ್ಧರು ಈ ನೆಲದಲ್ಲಿ ಜೀವಂತವಾಗಿದ್ದ ಅಸಮಾನತೆ, ಜಾತೀಯತೆ, ಅಸ್ಪೃಶ್ಯತೆಯನ್ನು ಖಂಡಿಸಿದ್ದರು ಎಂದರೆ ಇಂದಿಗೂ ಜೀವಂತವಿರುವ ಈ ಎಲ್ಲವುಗಳ ಸೃಷ್ಟಿಕರ್ತರು ಯಾರೆಂಬುದನ್ನು ತಿಳಿದುಕೊಳ್ಳಬೇಕು’ ಎಂದು ಹಂಪಿ ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷ ಹಾಗೂ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಎನ್. ಚಿನ್ನಸ್ವಾಮಿ ಸೋಸಲೆ ಹೇಳಿದರು.</p>.<p>ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಗುರುವಾರ ಟ್ರಸ್ಟ್ ಮತ್ತು ವಿಜಯನಗರ ಜಿಲ್ಲಾ ಬಾಬಾಸಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸಂಘದ ನೇತೃತ್ವದಲ್ಲಿ ಆಚರಿಸಿದ ಬುದ್ಧ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ನಾವೆಲ್ಲರೂ ಇನ್ನೂ ಸಹ ಸಿದ್ದಾರ್ಥರಾಗುತ್ತಿದ್ದೇವೆಯೇ ಹೊರತು (ಸ್ಥಾವರ - ದೇವಾಲಯಗಳು) ಗೌತಮ ಬುದ್ಧರಾಗುತ್ತಿಲ್ಲ (ಜಂಗಮ- ಜ್ಞಾನವಂತರು)’ ಎಂದರು.</p>.<p>ಸಾಹಿತಿ ಪೀರ್ ಪಾಷಾ ಮಾತನಾಡಿ, ಪ್ರೀತಿಯ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬ ವಿಶ್ವಾಸವನ್ನು ಬುದ್ಧನ ತತ್ವ ಸಾರುತ್ತದೆ ಎಂದರು.</p>.<p>ವಿಜಯನಗರ ಬುದ್ಧ ವಿಹಾರ ನಿರ್ಮಾಣ ಟ್ರಸ್ಟ್ ಕಾರ್ಯದರ್ಶಿ ಸೋಮಶೇಖರ್ ಬಣ್ಣದಮನೆ ಮಾತನಾಡಿ, ‘ನಾವ್ಯಾರೂ ಧರ್ಮ ದ್ರೋಹಿಗಳಲ್ಲ ನಮ್ಮ ಧರ್ಮಕ್ಕೆ ದ್ರೋಹ ಬಗೆದವರ ವಿರುದ್ಧ ನಾವು ಬೌದ್ಧಿಕ ಹೋರಾಟ ಮಾಡಬೇಕಾಗಿದೆ’ ಎಂದರು.</p>.<p>ನಿಂಬಗಲ್ ರಾಮಕೃಷ್ಣ, ಸಣ್ಣ ಮಾರೆಪ್ಪ, ಕಾರಿಗನೂರು ಯರ್ರಿಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>