ಬುಧವಾರ, 25 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಗರಿಬೊಮ್ಮನಹಳ್ಳಿ | ಕೆಕೆಆರ್‌ಟಿಸಿ ಬಸ್ ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

Published : 25 ಸೆಪ್ಟೆಂಬರ್ 2024, 4:17 IST
Last Updated : 25 ಸೆಪ್ಟೆಂಬರ್ 2024, 4:17 IST
ಫಾಲೋ ಮಾಡಿ
Comments

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಾಲವಿ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಕೆಕೆಆರ್‌ಟಿಸಿ ಬಸ್ ಉರುಳಿಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಹೊಸಪೇಟೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಬಸ್ ವಾಹನ ಒಂದನ್ನು ಹಿಂದಿಕ್ಕಲು ಯತ್ನಿಸಿದಾಗ ಎದುರಿಗೆ ಲಾರಿ ಬಂದಿದೆ. ಅಪಘಾತ ಆಗುವುದನ್ನು ತಪ್ಪಿಸಲು ಬಸ್ ಚಾಲಕ ಬಸ್ಸನ್ನು ಪಕ್ಕಕ್ಕೆ ಕೊಂಡೊಯ್ದಿದ್ದಾನೆ. ಆಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಬಸ್ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ನ ಗಾಜುಗಳು ಒಡೆದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಸ್ ಪಲ್ಟಿಯಾಗುತ್ತಿದ್ದಂತೆಯೇ ಪ್ರಯಾಣಿಕರು ಕಂಗಲಾಗಿ ಕೂಗಿಕೊಂಡರು, ಅಕ್ಕಪಕ್ಕದ ಜಮೀನುಗಳಲ್ಲಿದ್ದ ರೈತರು ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಬಸ್ ಡಿಪೋ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT