<p><strong>ಹೂವಿನಹಡಗಲಿ</strong>: ‘ಎಲ್ಲ ಸಮುದಾಯದೊಟ್ಟಿಗೆ ಅನ್ಯೋನ್ಯವಾಗಿ ಬದುಕುವುದನ್ನು 16ನೇ ಶತಮಾನದಲ್ಲೇ ಕನಕದಾಸರು ಹೇಳಿಕೊಟ್ಟಿದ್ದಾರೆ. ಹಾಲುಮತ ಸಮಾಜದವರು ಯಾರೊಂದಿಗೂ ಸಂಘರ್ಷಕ್ಕಿಳಿಯದೇ ಸೌಹಾರ್ದತೆಯಿಂದ ಬದುಕಿ ಮಾದರಿಯಾಗಬೇಕು’ ಎಂದು ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಮೈಲಾರ ಗ್ರಾಮದ ಕಾಗಿನೆಲೆ ಶಾಖಾ ಮಠದಲ್ಲಿ ಸೋಮವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಶ್ರೀಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅಸಮಾನತೆ, ಜಾತಿಯತೆ ವಿರುದ್ಧ ಸಮರ ಸಾರಿದ್ದ ಕನಕದಾಸರು ಸೌಹಾರ್ದ ಸಮಾಜ ಕಟ್ಟುವ ಆಶಯ ಹೊಂದಿದ್ದರು. ಅವರ ಆದರ್ಶ ಚಿಂತನೆಗಳನ್ನು ನಾವೆಲ್ಲ ಪಾಲಿಸಬೇಕಿದೆ’ ಎಂದರು.</p>.<p>‘ಹಾಲುಮತ ಸಮಾಜದವರು ತಮ್ಮ ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡಬೇಕು. ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಾಲೆ ಕಟ್ಟಿದ್ದೇವೆ. ವಿದ್ಯಾಮಂದಿರದಲ್ಲಿ ಜಾತಿಯ ವಿಷ ಬೀಜ ಬಿತ್ತಬಾರದು. ಮಠದ ಸೂಚನೆ, ಮಾರ್ಗದರ್ಶನವನ್ನು ಎಲ್ಲರೂ ಪಾಲಿಸಬೇಕು’ ಎಂದು ಹೇಳಿದರು.</p>.<p>ಶಾಸಕ ಎಲ್.ಕೃಷ್ಣನಾಯ್ಕ, ಕಾರ್ಣಿಕದ ಗೊರವಯ್ಯ ರಾಮಣ್ಣ, ರಾಜ್ಯ ಕುರುಬರ ಸಂಘದ ನಿರ್ದೇಶಕ ಬಿ.ಹನುಮಂತಪ್ಪ, ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದನಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬೀರಪ್ಪ, ಮುಖಂಡರಾದ ಎಂ.ಪರಮೇಶ್ವರಪ್ಪ, ಈಟಿ ಲಿಂಗರಾಜ, ಪರಶುರಾಮಪ್ಪ, ಮರಿರಾಮಪ್ಪ, ಈಟಿ ಮಾಲತೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ‘ಎಲ್ಲ ಸಮುದಾಯದೊಟ್ಟಿಗೆ ಅನ್ಯೋನ್ಯವಾಗಿ ಬದುಕುವುದನ್ನು 16ನೇ ಶತಮಾನದಲ್ಲೇ ಕನಕದಾಸರು ಹೇಳಿಕೊಟ್ಟಿದ್ದಾರೆ. ಹಾಲುಮತ ಸಮಾಜದವರು ಯಾರೊಂದಿಗೂ ಸಂಘರ್ಷಕ್ಕಿಳಿಯದೇ ಸೌಹಾರ್ದತೆಯಿಂದ ಬದುಕಿ ಮಾದರಿಯಾಗಬೇಕು’ ಎಂದು ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಮೈಲಾರ ಗ್ರಾಮದ ಕಾಗಿನೆಲೆ ಶಾಖಾ ಮಠದಲ್ಲಿ ಸೋಮವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಶ್ರೀಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಅಸಮಾನತೆ, ಜಾತಿಯತೆ ವಿರುದ್ಧ ಸಮರ ಸಾರಿದ್ದ ಕನಕದಾಸರು ಸೌಹಾರ್ದ ಸಮಾಜ ಕಟ್ಟುವ ಆಶಯ ಹೊಂದಿದ್ದರು. ಅವರ ಆದರ್ಶ ಚಿಂತನೆಗಳನ್ನು ನಾವೆಲ್ಲ ಪಾಲಿಸಬೇಕಿದೆ’ ಎಂದರು.</p>.<p>‘ಹಾಲುಮತ ಸಮಾಜದವರು ತಮ್ಮ ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡಬೇಕು. ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಾಲೆ ಕಟ್ಟಿದ್ದೇವೆ. ವಿದ್ಯಾಮಂದಿರದಲ್ಲಿ ಜಾತಿಯ ವಿಷ ಬೀಜ ಬಿತ್ತಬಾರದು. ಮಠದ ಸೂಚನೆ, ಮಾರ್ಗದರ್ಶನವನ್ನು ಎಲ್ಲರೂ ಪಾಲಿಸಬೇಕು’ ಎಂದು ಹೇಳಿದರು.</p>.<p>ಶಾಸಕ ಎಲ್.ಕೃಷ್ಣನಾಯ್ಕ, ಕಾರ್ಣಿಕದ ಗೊರವಯ್ಯ ರಾಮಣ್ಣ, ರಾಜ್ಯ ಕುರುಬರ ಸಂಘದ ನಿರ್ದೇಶಕ ಬಿ.ಹನುಮಂತಪ್ಪ, ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದನಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಬೀರಪ್ಪ, ಮುಖಂಡರಾದ ಎಂ.ಪರಮೇಶ್ವರಪ್ಪ, ಈಟಿ ಲಿಂಗರಾಜ, ಪರಶುರಾಮಪ್ಪ, ಮರಿರಾಮಪ್ಪ, ಈಟಿ ಮಾಲತೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>