‘ಬಾಲಕಿ ಅಪಾಯದಿಂದ ಪಾರಾಗಿದ್ದರೂ ಮುಖ, ಗಂಟಲಿನ ಭಾಗದಲ್ಲಿ ಆಳವಾದ ಗಾಯವಾಗಿದೆ. ಹೀಗಾಗಿ ಇಲ್ಲಿನ 100 ಹಾಸಿಗೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಆಕೆಯನ್ನು ಬಳ್ಳಾರಿಗೆ ಕಳುಹಿಸಿಕೊಡಲಾಗಿದೆ. ಇತರ ಮೂನ್ನಾಲ್ಕು ಮಂದಿಗೆ ಸಹ ನಾಯಿ ಕಚ್ಚಿದೆ, ಅವರಿಗೆ ರೇಬಿಸ್ ಚುಚ್ಚುಮದ್ದು ನೀಡಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ‘ಪ್ರಜಾವಾಣಿ’ಗೆ ತಿಳಿಸಿದರು.