ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೂಡ್ಲಿಗಿ | ಕೋಡಿ ಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯುವಾಗ ಯುವಕ ಸಾವು

Published : 12 ಅಕ್ಟೋಬರ್ 2024, 6:43 IST
Last Updated : 12 ಅಕ್ಟೋಬರ್ 2024, 6:43 IST
ಫಾಲೋ ಮಾಡಿ
Comments

ಕೂಡ್ಲಿಗಿ (ವಿಜಯನಗರ ಜಿಲ್ಲೆ): ಕೋಡಿ ಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯಲು ಯತ್ನಿಸಿದ ಯುವಕನೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಗಂಡಬೊಮ್ಮನಹಳ್ಳಿ ಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ.

ತಾಲ್ಲೂಕಿನ ಕೆ.ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ ಅವರ ಮಗ ಚೇತನ್ ಕುಮಾರ್ (21) ಮೃತ ಯುವಕ. ಅವರು ತನ್ನ ಕುಟುಂಬದವರ ಜೊತೆ ಕೋಡಿ ಬಿದ್ದ ಕೆರೆಯನ್ನು ನೋಡಲು ತೆರಳಿದ್ದರು. ಇಬ್ಬರು ಸ್ನೇಹಿತರೊಂದಿಗೆ ತುಂಬಿದ ಕೆರೆ ಕೋಡಿ ಬಳಿ ಫೋಟೊ ತೆಗೆದುಕೊಳ್ಳಲು ಹೋದಾಗ ಅಕಸ್ಮಾತ್ ಕಾಲು ಜಾರಿ ಚೇತನ್ ಕುಮಾರ್ ಕೆಳಗಡೆ ಬಿದ್ದರು. ಅವರನ್ನು ಉಳಿಸಿಕೊಳ್ಳಲು ಅಲ್ಲಿದ್ದವರು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಅವರು ನೀರಿನ ರಭಸಕ್ಕೆ ಸಿಲುಕಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT