<p>ಪ್ರಜಾವಾಣಿ ವಾರ್ತೆ </p>.<p><strong>ವಿಜಯಪುರ</strong>: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ ) ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಮಂಗಳವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.</p>.<p>ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಿರುವ ಜಾತಿಗಣತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡಬಾರದು. ₹159 ಕೋಟಿ ಖರ್ಚು ಮಾಡಿ ತಯಾರಿಸಿರುವ ವರದಿ ತಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿದರು.</p>.<p>ದಿ.ದೇವರಾಜ ಅರಸು ಅವರು ಹಾವನೂರ ಆಯೋಗ ರಚಿಸಿ ಹಿಂದುಳಿದ ವರ್ಗಗಳ ಆಧ್ಯಯನಕ್ಕೆ ಮುನ್ನುಡಿ ಬರೆದಿದ್ದರು. ವೀರಪ್ಪ ಮೊಯ್ಲಿ ಅವರು ಮೀಸಲಾತಿ ಏರಿಸುವ ಪ್ರಯತ್ನವನ್ನು ಮಾಡಿದ್ದರು. ಹೀಗಾಗಿ ಜಾತಿಗಣತಿ ದೇಶಕ್ಕೆ ಮಾದರಿಯಾಗಿದೆ.</p>.<p>ಜಾತಿಗಣತಿ ವರದಿ ಜಾರಿಗೆ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಸರ್ಕಾರಗಳು ಅದಕ್ಕೆ ಪೂರಕವಾಗಿ ಕಾರ್ಯಕ್ರಮ ರೂಪಿಸಬಹುದು. ರಾಜ್ಯದ 7ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದರು.</p>.<p>ಜಾತಿಗಣತಿ ವರದಿ ವಿಧಾನವನ್ನು ತಜ್ಞರ ಸಮಿತಿ ಮತ್ತು ಐಐಎಂ ಸಂಸ್ಥೆಗಳು ದೃಢೀಕರಿಸಿವೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿಗಣತಿ ಜಾರಿಗೊಳಿಸುವುದಾಗಿ ಹೇಳಿತ್ತು, ಕೊಟ್ಟ ಮಾತಿನಂತೆ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿ ಜೊಳ್ಳು ಬೆದರಿಕೆಗೆ ಮುಖ್ಯಮಂತ್ರಿಗಳು ಮಣೆಹಾಕದೆ ವರದಿಯನ್ನು ಒಪ್ಪಿ ಬಿಡುಗಡೆಗೊಳಿಸಬೇಕು ಎಂದು ಮುಖಂಡರು ಆಗ್ರಹಿಸಿದರು.</p>.<p>ಅಹಿಂದ ಮುಖಂಡರಾದ ಎಸ್.ಎಂ.ಪಾಟೀಲ (ಗಣಿಯಾರ), ಸೋಮನಾಥ ಕಳ್ಳಿಮನಿ, ಸಂಜು ಕಂಬಾಗಿ, ಅಕ್ರಮ ಮಾಶ್ಯಾಳಕರ, ಕಾಮೇಶ ಉಕ್ಕಲಿ, ಮಲ್ಲು ಬಿದರಿ, ದಾದಾಪೀರ ಬಡಕಲ್, ಭೀಮನಗೌಡ ಹಳಿಮನಿ, ನಿರ್ಮಲಾ ಹೊಸಮನಿ, ಸಚಿತಾ ವಗ್ಗರ, ಭೀಮು ಉತ್ನಾಳ, ಮಲ್ಲು ಕಾಮನಕೇರಿ, ಭೀರಪ್ಪ ಜುಮನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ </p>.<p><strong>ವಿಜಯಪುರ</strong>: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ ) ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಅಹಿಂದ ಮುಖಂಡರು ಮಂಗಳವಾರ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.</p>.<p>ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಿರುವ ಜಾತಿಗಣತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ಮಾಡಬಾರದು. ₹159 ಕೋಟಿ ಖರ್ಚು ಮಾಡಿ ತಯಾರಿಸಿರುವ ವರದಿ ತಕ್ಷಣ ಜಾರಿಯಾಗಬೇಕು ಎಂದು ಒತ್ತಾಯಿಸಿದರು.</p>.<p>ದಿ.ದೇವರಾಜ ಅರಸು ಅವರು ಹಾವನೂರ ಆಯೋಗ ರಚಿಸಿ ಹಿಂದುಳಿದ ವರ್ಗಗಳ ಆಧ್ಯಯನಕ್ಕೆ ಮುನ್ನುಡಿ ಬರೆದಿದ್ದರು. ವೀರಪ್ಪ ಮೊಯ್ಲಿ ಅವರು ಮೀಸಲಾತಿ ಏರಿಸುವ ಪ್ರಯತ್ನವನ್ನು ಮಾಡಿದ್ದರು. ಹೀಗಾಗಿ ಜಾತಿಗಣತಿ ದೇಶಕ್ಕೆ ಮಾದರಿಯಾಗಿದೆ.</p>.<p>ಜಾತಿಗಣತಿ ವರದಿ ಜಾರಿಗೆ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಸರ್ಕಾರಗಳು ಅದಕ್ಕೆ ಪೂರಕವಾಗಿ ಕಾರ್ಯಕ್ರಮ ರೂಪಿಸಬಹುದು. ರಾಜ್ಯದ 7ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಅನುಕೂಲವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದರು.</p>.<p>ಜಾತಿಗಣತಿ ವರದಿ ವಿಧಾನವನ್ನು ತಜ್ಞರ ಸಮಿತಿ ಮತ್ತು ಐಐಎಂ ಸಂಸ್ಥೆಗಳು ದೃಢೀಕರಿಸಿವೆ. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜಾತಿಗಣತಿ ಜಾರಿಗೊಳಿಸುವುದಾಗಿ ಹೇಳಿತ್ತು, ಕೊಟ್ಟ ಮಾತಿನಂತೆ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿ ಜೊಳ್ಳು ಬೆದರಿಕೆಗೆ ಮುಖ್ಯಮಂತ್ರಿಗಳು ಮಣೆಹಾಕದೆ ವರದಿಯನ್ನು ಒಪ್ಪಿ ಬಿಡುಗಡೆಗೊಳಿಸಬೇಕು ಎಂದು ಮುಖಂಡರು ಆಗ್ರಹಿಸಿದರು.</p>.<p>ಅಹಿಂದ ಮುಖಂಡರಾದ ಎಸ್.ಎಂ.ಪಾಟೀಲ (ಗಣಿಯಾರ), ಸೋಮನಾಥ ಕಳ್ಳಿಮನಿ, ಸಂಜು ಕಂಬಾಗಿ, ಅಕ್ರಮ ಮಾಶ್ಯಾಳಕರ, ಕಾಮೇಶ ಉಕ್ಕಲಿ, ಮಲ್ಲು ಬಿದರಿ, ದಾದಾಪೀರ ಬಡಕಲ್, ಭೀಮನಗೌಡ ಹಳಿಮನಿ, ನಿರ್ಮಲಾ ಹೊಸಮನಿ, ಸಚಿತಾ ವಗ್ಗರ, ಭೀಮು ಉತ್ನಾಳ, ಮಲ್ಲು ಕಾಮನಕೇರಿ, ಭೀರಪ್ಪ ಜುಮನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>