ವಿಜಯಪುರ: ಶಿಕ್ಷಕರ ಅರ್ಹತಾ ಪರೀಕ್ಷೆಗಳು ನಡೆದ ನಗರದ ಪಿಡಿಜೆ ಪ್ರೌಢಶಾಲೆ ಹಾಗೂ ವಿ.ಬಿ.ದರ್ಬಾರ್ ಹೈಸ್ಕೂಲ್ ಕೇಂದ್ರಗಳಿಗೆ ಭಾನುವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷೆಗಳು ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕಿ ಎ. ಪಿ. ಚೌಹಾಣ, ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷ ಎ. ಡಿ. ಅವಟಿ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರದ ಉಮಾದೇವಿ ಹಾಗೂ ಸ್ಥಾನಿಕ ಜಾಗೃತ ಧಳದ ಅಧಿಕಾರಿ ಶಿವಾನಂದ ಧನ್ಯಾಳ ಉಪಸ್ಥಿತರಿದ್ದರು.