<p><strong>ನಿಡಗುಂದಿ</strong>: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಲಗೂರು ಕ್ರಾಸ್ ಬಳಿಯ ಚೆಕ್ಪೋಸ್ಟ್ ಮತ್ತು ಅರಳದಿನ್ನಿ ಗ್ರಾಮದ ಬಳಿಯ ಚೆಕ್ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಚೆಕ್ಪೋಸ್ಟ್ ಮಾರ್ಗವಾಗಿ ಸಾಗುತ್ತಿದ್ದ ಕೆಲ ವಾಹನಗಳನ್ನು ಖುದ್ದು ಡಿ.ಸಿ ಮತ್ತು ಎಸ್.ಪಿ ಪರಿಶೀಲನೆ ಮಾಡಿದರು. ಅಂತರ್ ಜಿಲ್ಲಾ ಚೆಕ್ಪೋಸ್ಟ್ಗಳ ಮೂಲಕ ಹೊರಹೋಗುವ ಮತ್ತು ಒಳ ಬರುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸಿಬ್ಬಂದಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ‘ಜಿಲ್ಲೆಯಲ್ಲಿ 11 ಅಂತರರಾಜ್ಯ, 13 ಅಂತರ್ ಜಿಲ್ಲಾ ಸೇರಿ ಒಟ್ಟು 28 ಚೆಕ್ಪೋಸ್ಟ್ಗಳಿವೆ. ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಂದಾಜು ₹3 ಕೋಟಿಯನ್ನು ಇದುವರೆಗೆ ಜಿಲ್ಲೆಯ ನಾನಾ ಚೆಕ್ ಪೋಸ್ಟ್ಗಳಿಂದ ವಶಪಡಿಸಿಕೊಳ್ಳಲಾಗಿದೆ’ ಎಂದರು.</p>.<p>ತಹಶೀಲ್ದಾರ್ ಕು.ನೀಲಪ್ರಭಾ, ಕಂದಾಯ ನಿರೀಕ್ಷಕ ಸಲೀಂ ಯಲಗೋಡ, ಸಿಪಿಐ ಶರಣಗೌಡ ಗೌಡರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಡಗುಂದಿ</strong>: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಲಗೂರು ಕ್ರಾಸ್ ಬಳಿಯ ಚೆಕ್ಪೋಸ್ಟ್ ಮತ್ತು ಅರಳದಿನ್ನಿ ಗ್ರಾಮದ ಬಳಿಯ ಚೆಕ್ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಎಸ್ಪಿ ಋಷಿಕೇಶ ಸೋನಾವಣೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.</p>.<p>ಚೆಕ್ಪೋಸ್ಟ್ ಮಾರ್ಗವಾಗಿ ಸಾಗುತ್ತಿದ್ದ ಕೆಲ ವಾಹನಗಳನ್ನು ಖುದ್ದು ಡಿ.ಸಿ ಮತ್ತು ಎಸ್.ಪಿ ಪರಿಶೀಲನೆ ಮಾಡಿದರು. ಅಂತರ್ ಜಿಲ್ಲಾ ಚೆಕ್ಪೋಸ್ಟ್ಗಳ ಮೂಲಕ ಹೊರಹೋಗುವ ಮತ್ತು ಒಳ ಬರುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಸಿಬ್ಬಂದಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ‘ಜಿಲ್ಲೆಯಲ್ಲಿ 11 ಅಂತರರಾಜ್ಯ, 13 ಅಂತರ್ ಜಿಲ್ಲಾ ಸೇರಿ ಒಟ್ಟು 28 ಚೆಕ್ಪೋಸ್ಟ್ಗಳಿವೆ. ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಅಂದಾಜು ₹3 ಕೋಟಿಯನ್ನು ಇದುವರೆಗೆ ಜಿಲ್ಲೆಯ ನಾನಾ ಚೆಕ್ ಪೋಸ್ಟ್ಗಳಿಂದ ವಶಪಡಿಸಿಕೊಳ್ಳಲಾಗಿದೆ’ ಎಂದರು.</p>.<p>ತಹಶೀಲ್ದಾರ್ ಕು.ನೀಲಪ್ರಭಾ, ಕಂದಾಯ ನಿರೀಕ್ಷಕ ಸಲೀಂ ಯಲಗೋಡ, ಸಿಪಿಐ ಶರಣಗೌಡ ಗೌಡರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>