<p><strong>ವಿಜಯಪುರ</strong>: ‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಹೆಸರಿನಲ್ಲಿ₹40 ಸಾವಿರ ಕೋಟಿ ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮೊದಲು ತನಿಖೆಗೊಳಪಡಿಸಬೇಕು. ಆಗ ಇನ್ನು ಹೆಚ್ಚಿನ ಸತ್ಯಾಂಶ ಹೊರಬೀಳಲಿದೆ. ಈ ಕುರಿತು ಸಮಗ್ರ ತನಿಖೆ ನಡೆಯಬೇಕು’ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅವ್ಯವಹಾರ ನಡೆಸಿದ ಸಮಯದಲ್ಲಿ ಯತ್ನಾಳ ಕೂಡ ಬಿಜೆಪಿ ಸರ್ಕಾರದ ಭಾಗವಾಗಿದ್ದರು, ಆಗ ಈ ಅವ್ಯವಹಾರದ ಬಗ್ಗೆ ಧ್ವನಿ ಏಕೆ ಎತ್ತಲಿಲ್ಲ? ಆಗ ನಿಮ್ಮ ಪಾಲು ಅದರಲ್ಲಿತ್ತೋ? ಅಥವಾ ಪಾಲು ಹಣ ಹಂಚಿಕೆಯಲ್ಲಿ ಧಕ್ಕೆಯಾಗಿದ್ದಕ್ಕೆ ಈ ರೀತಿ ಆರೋಪಿಸುತ್ತಿದ್ದೀರೋ’ ಎಂದು ಪ್ರಶ್ನಿಸಿದರು.</p>.<p>‘ಯತ್ನಾಳರ ಬಗ್ಗೆ ಜನರಿಗೆ ಗೌರವವಿದೆ. ಅವರ ಈ ಗೌರವ ಇನ್ನೂ ಹೆಚ್ಚಾಗಬೇಕಿದ್ದರೆ ಮೊದಲು ಚುನಾವಣೆಗೆ ಸ್ಪರ್ಧಿಸಿದಾಗ ಎಷ್ಟು ಪ್ರಮಾಣದ ಆಸ್ತಿ ಇತ್ತು? ಈಗ ಎಷ್ಟು ಪ್ರಮಾಣದ ಆಸ್ತಿ ಇದೆ? ಎಂದು ಜನರ ಮುಂದೆ ಬಿಚ್ಚಿಡಬೇಕು. ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅವರಿಗೆ ₹2 ಸಾವಿರ ಕೋಟಿ ಎಲ್ಲಿಂದ ಬಂತು? ಅವರದೇ ‘ಸಿದ್ಧಸಿರಿ’ ಸಹಕಾರ ಬ್ಯಾಂಕ್ ವಹಿವಾಟು–ಹೀಗೆ ಎಲ್ಲವನ್ನೂ ಬಹಿರಂಗಪಡಿಸಿ ತಮ್ಮ ಪರಿಶುದ್ಧತೆ ಸಾಬೀತು ಪಡಿಸಬೇಕು’ ಎಂದು ಸವಾಲು ಹಾಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಹೆಸರಿನಲ್ಲಿ₹40 ಸಾವಿರ ಕೋಟಿ ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮೊದಲು ತನಿಖೆಗೊಳಪಡಿಸಬೇಕು. ಆಗ ಇನ್ನು ಹೆಚ್ಚಿನ ಸತ್ಯಾಂಶ ಹೊರಬೀಳಲಿದೆ. ಈ ಕುರಿತು ಸಮಗ್ರ ತನಿಖೆ ನಡೆಯಬೇಕು’ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಆಗ್ರಹಿಸಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅವ್ಯವಹಾರ ನಡೆಸಿದ ಸಮಯದಲ್ಲಿ ಯತ್ನಾಳ ಕೂಡ ಬಿಜೆಪಿ ಸರ್ಕಾರದ ಭಾಗವಾಗಿದ್ದರು, ಆಗ ಈ ಅವ್ಯವಹಾರದ ಬಗ್ಗೆ ಧ್ವನಿ ಏಕೆ ಎತ್ತಲಿಲ್ಲ? ಆಗ ನಿಮ್ಮ ಪಾಲು ಅದರಲ್ಲಿತ್ತೋ? ಅಥವಾ ಪಾಲು ಹಣ ಹಂಚಿಕೆಯಲ್ಲಿ ಧಕ್ಕೆಯಾಗಿದ್ದಕ್ಕೆ ಈ ರೀತಿ ಆರೋಪಿಸುತ್ತಿದ್ದೀರೋ’ ಎಂದು ಪ್ರಶ್ನಿಸಿದರು.</p>.<p>‘ಯತ್ನಾಳರ ಬಗ್ಗೆ ಜನರಿಗೆ ಗೌರವವಿದೆ. ಅವರ ಈ ಗೌರವ ಇನ್ನೂ ಹೆಚ್ಚಾಗಬೇಕಿದ್ದರೆ ಮೊದಲು ಚುನಾವಣೆಗೆ ಸ್ಪರ್ಧಿಸಿದಾಗ ಎಷ್ಟು ಪ್ರಮಾಣದ ಆಸ್ತಿ ಇತ್ತು? ಈಗ ಎಷ್ಟು ಪ್ರಮಾಣದ ಆಸ್ತಿ ಇದೆ? ಎಂದು ಜನರ ಮುಂದೆ ಬಿಚ್ಚಿಡಬೇಕು. ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅವರಿಗೆ ₹2 ಸಾವಿರ ಕೋಟಿ ಎಲ್ಲಿಂದ ಬಂತು? ಅವರದೇ ‘ಸಿದ್ಧಸಿರಿ’ ಸಹಕಾರ ಬ್ಯಾಂಕ್ ವಹಿವಾಟು–ಹೀಗೆ ಎಲ್ಲವನ್ನೂ ಬಹಿರಂಗಪಡಿಸಿ ತಮ್ಮ ಪರಿಶುದ್ಧತೆ ಸಾಬೀತು ಪಡಿಸಬೇಕು’ ಎಂದು ಸವಾಲು ಹಾಕಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>