<p>ವಿಜಯಪುರ: ನಗರದ ಬಬಲೇಶ್ವರ ನಾಕಾ ಬಳಿ ನಿರ್ಮಿಸಲಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ವಾಣಿಜ್ಯ ಸಂಕೀರ್ಣದ ಮಳಿಗೆಗಳನ್ನು ಆದಷ್ಟು ಬೇಗ ಹಂಚಿಕೆ ಮಾಡಬೇಕು ಎಂದು ಬಿಜೆಪಿ ಮುಖಂಡ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.</p>.<p>ಎಸ್.ಇ.ಪಿ, ಟಿ.ಎಸ್.ಪಿ ಅನುದಾನದ ಅಡಿಯಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಹಂಚಬೇಕು. ಆದರೆ, ಮಹಾನಗರ ಪಾಲಿಕೆಯ ಸಭೆಯಲ್ಲಿ ಈ ಬಗ್ಗೆ ಯಾವ ಉಲ್ಲೇಖವೂ ಇಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಷಯವಾಗಿ ಮಹಾನಗರ ಪಾಲಿಕೆ ನಿಯಮಾವಳಿ ಗಾಳಿಗೆ ತೂರಿದೆ ಎಂದು ಆರೋಪಿಸಿದ್ದಾರೆ.</p>.<p>‘ರಸ್ತೆ ಅತಿಕ್ರಮಣದಲ್ಲಿ ಅಂಗಡಿ ಕಳೆದುಕೊಂಡಿರುವರಿಗೆ ಹಾಗೂ ಉಳಿದವರಿಗೆ ಹಂಚಿಕೆ ಮಾಡುವ ವಿಷಯ ಬರೆಯಲಾಗಿದೆ. ಈ ಮಳಿಗೆಗಳನ್ನು ಉಳಿದ ಸಮುದಾಯಗಳಿಗೆ ಹಂಚಿಕೆ ಮಾಡಲು ಬರುವುದೇ ಇಲ್ಲ. 2020–21ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್.ಇ.ಪಿ, ಟಿ.ಎಸ್.ಪಿ ಅಡಿಯಲ್ಲಿ ₹ 3.56 ಕೋಟಿ ವೆಚ್ಚದಲ್ಲಿ ಈ ಮಳಿಗೆ ನಿರ್ಮಿಸಿ 2022 ರಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದೆ. ಹೀಗಿರುವಾಗ ಎಸ್.ಸಿ. ಸಮುದಾಯಕ್ಕೆ ಉಪ ಜೀವನ ಹಾಗೂ ಸ್ವ ಉದ್ಯೋಗಕ್ಕೆ ಅನುಕೂಲವಾಗಲು ಈ ಮಳಿಗೆ ಹಂಚಿಕೆಯಾಗಬೇಕು. ಆದರೆ ಈ ವಿಷಯವಾಗಿ ಮಹಾನಗರಪಾಲಿಕೆ ಬೇರೆ ನಿಲುವು ತಾಳಿ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಈ ವಿಷಯವನ್ನೇ ಉಲ್ಲೇಖಿಸಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಎಸ್.ಸಿ., ಎಸ್.ಟಿ. ಸಮುದಾಯಕ್ಕೆ ದೊಡ್ಡ ಅನ್ಯಾಯ ಮಾಡಲಾಗಿದೆ. ಕೂಡಲೇ ಇದನ್ನು ತಿದ್ದುಪಡಿ ಮಾಡಿ ಎಸ್.ಸಿ., ಎಸ್.ಟಿ. ಸಮುದಾಯಗಳಿಗೆ ಹಂಚಿಕೆ ಮಾಡಬೇಕು. ಇಲ್ಲವಾದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ನಗರದ ಬಬಲೇಶ್ವರ ನಾಕಾ ಬಳಿ ನಿರ್ಮಿಸಲಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ವಾಣಿಜ್ಯ ಸಂಕೀರ್ಣದ ಮಳಿಗೆಗಳನ್ನು ಆದಷ್ಟು ಬೇಗ ಹಂಚಿಕೆ ಮಾಡಬೇಕು ಎಂದು ಬಿಜೆಪಿ ಮುಖಂಡ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.</p>.<p>ಎಸ್.ಇ.ಪಿ, ಟಿ.ಎಸ್.ಪಿ ಅನುದಾನದ ಅಡಿಯಲ್ಲಿ ನಿರ್ಮಿಸಿದ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಹಂಚಬೇಕು. ಆದರೆ, ಮಹಾನಗರ ಪಾಲಿಕೆಯ ಸಭೆಯಲ್ಲಿ ಈ ಬಗ್ಗೆ ಯಾವ ಉಲ್ಲೇಖವೂ ಇಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಷಯವಾಗಿ ಮಹಾನಗರ ಪಾಲಿಕೆ ನಿಯಮಾವಳಿ ಗಾಳಿಗೆ ತೂರಿದೆ ಎಂದು ಆರೋಪಿಸಿದ್ದಾರೆ.</p>.<p>‘ರಸ್ತೆ ಅತಿಕ್ರಮಣದಲ್ಲಿ ಅಂಗಡಿ ಕಳೆದುಕೊಂಡಿರುವರಿಗೆ ಹಾಗೂ ಉಳಿದವರಿಗೆ ಹಂಚಿಕೆ ಮಾಡುವ ವಿಷಯ ಬರೆಯಲಾಗಿದೆ. ಈ ಮಳಿಗೆಗಳನ್ನು ಉಳಿದ ಸಮುದಾಯಗಳಿಗೆ ಹಂಚಿಕೆ ಮಾಡಲು ಬರುವುದೇ ಇಲ್ಲ. 2020–21ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್.ಇ.ಪಿ, ಟಿ.ಎಸ್.ಪಿ ಅಡಿಯಲ್ಲಿ ₹ 3.56 ಕೋಟಿ ವೆಚ್ಚದಲ್ಲಿ ಈ ಮಳಿಗೆ ನಿರ್ಮಿಸಿ 2022 ರಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದೆ. ಹೀಗಿರುವಾಗ ಎಸ್.ಸಿ. ಸಮುದಾಯಕ್ಕೆ ಉಪ ಜೀವನ ಹಾಗೂ ಸ್ವ ಉದ್ಯೋಗಕ್ಕೆ ಅನುಕೂಲವಾಗಲು ಈ ಮಳಿಗೆ ಹಂಚಿಕೆಯಾಗಬೇಕು. ಆದರೆ ಈ ವಿಷಯವಾಗಿ ಮಹಾನಗರಪಾಲಿಕೆ ಬೇರೆ ನಿಲುವು ತಾಳಿ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಈ ವಿಷಯವನ್ನೇ ಉಲ್ಲೇಖಿಸಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ಎಸ್.ಸಿ., ಎಸ್.ಟಿ. ಸಮುದಾಯಕ್ಕೆ ದೊಡ್ಡ ಅನ್ಯಾಯ ಮಾಡಲಾಗಿದೆ. ಕೂಡಲೇ ಇದನ್ನು ತಿದ್ದುಪಡಿ ಮಾಡಿ ಎಸ್.ಸಿ., ಎಸ್.ಟಿ. ಸಮುದಾಯಗಳಿಗೆ ಹಂಚಿಕೆ ಮಾಡಬೇಕು. ಇಲ್ಲವಾದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>