ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ: ವಾರ್ತಾ ಇಲಾಖೆ ವಾಹನ ಚಾಲಕ ತಾಟೆಗೆ ಬೀಳ್ಕೊಡುಗೆ

Published : 4 ಅಕ್ಟೋಬರ್ 2024, 13:09 IST
Last Updated : 4 ಅಕ್ಟೋಬರ್ 2024, 13:09 IST
ಫಾಲೋ ಮಾಡಿ
Comments

ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಕಚೇರಿಯಲ್ಲಿ 27 ವರ್ಷಗಳಿಂದ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ, ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾಹನ ಚಾಲಕ ಜಿ.ಬಿ.ತಾಟೆ ಅವರನ್ನು ಮಂಗಳವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು. 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಮಾತನಾಡಿ, ಈ ಕಚೇರಿಯಲ್ಲಿ 27 ವರ್ಷಗಳಿಂದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಪತ್ರಕರ್ತರು ಸೇರಿದಂತೆ ಕಚೇರಿ ಸಿಬ್ಬಂದಿಯೊಂದಿಗೆ ಅತ್ಯಂತ ಪ್ರೀತಿ, ವಿಶ್ವಾಸದಿಂದ ಯಾರ ಮನಸ್ಸಿಗೆ ನೋವು ಬಾರದ ಹಾಗೆ ನಡೆದುಕೊಳ್ಳುವ ಮೂಲಕ ಸರ್ಕಾರಿ ಸೇವೆಗೆ ವಿಶೇಷ ಗೌರವವನ್ನು ನೀಡಿ, ಇತರರಿಗೂ ಮಾದರಿಯಾಗಿದ್ದಾರೆ. ಇವರ ಮುಂದಿನ ನಿವೃತ್ತಿ ಜೀವನವು ಅತ್ಯಂತ ಸುಖಕರವಾಗಿರಲಿ ಎಂದು ಹಾರೈಸಿದರು. 

ವಾರ್ತಾ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಮಂಜುಳಾ ದುರಗನ್ನವರ, ಸಿನಿ ಚಾಲಕರಾದ ಸುರೇಶ ಅಂಬಿಗೇರ, ಪ್ರಶಿಕ್ಷಣಾರ್ಥಿ ಶಿಲ್ಪಾ ಚವ್ಹಾಣ, ಛಾಯಾಗ್ರಾಹಕ ರಾಜು ಢವಳಗಿ, ಪ್ರಕಾಶ ಇದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT