<p><strong>ಸೋಲಾಪುರ:</strong> ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭತ್ಯೆ ರೂಪದಲ್ಲಿ ಅತ್ಯಲ್ಪ ಮೊತ್ತವನ್ನು ಪಾವತಿಸಲಾಗುತ್ತಿದ್ದು, ಈ ಭತ್ಯೆಯನ್ನು ಪಾಲಿಕೆ ಹೆಚ್ಚಿಸಬೇಕು ಎಂದು ಪೌರಕಾರ್ಮಿಕರ ಸಂಘಟನೆಯ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಜಾನರಾವ್ ಆಗ್ರಹಿಸಿದ್ದಾರೆ. </p>.<p>ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಪಾಲಿಕೆಯ ನೌಕರರು ಹಣದುಬ್ಬರ, ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ನೌಕರರಿಗೆ ಭತ್ಯೆಯನ್ನು ಅಗತ್ಯಕ್ಕೆ ತಕ್ಕಂತೆ ಕಾಲಕಾಲಕ್ಕೆ ಹೆಚ್ಚಿಸಬೇಕು ಎಂದಿದ್ದಾರೆ.</p>.<p>ಪಾಲಿಕೆಯಲ್ಲಿ ಅಂದಾಜು 4 ಸಾವಿರ ಜನರು ಕೆಲಸ ಮಾಡುತ್ತಿದ್ದಾರೆ. ಪೌರಕಾರ್ಮಿಕರು, ಆರೋಗ್ಯ ನಿರೀಕ್ಷಕರು ಹಾಗೂ ವಿವಿಧ ವಿಭಾಗದ ಉದ್ಯೋಗಿಗಳಿಗೆ ವಿವಿಧ ಭತ್ಯೆಗಳನ್ನು ನೀಡಲಾಗುತ್ತಿದೆ. ಆದರೇ ಕಳೆದ ಅನೇಕ ವರ್ಷಗಳಿಂದ ಈ ಭತ್ಯೆಗಳ ಮೊತ್ತದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. </p>.<p>ಆರೋಗ್ಯ ನಿರೀಕ್ಷಕರಿಗೆ ಪೆಟ್ರೋಲ್ ಭತ್ಯೆಗೆ ಕಳೆದ 25 ವರ್ಷಗಳಿಂದ ಮಾಸಿಕ ₹ 100 ನೀಡಲಾಗುತ್ತಿದೆ. ಸದ್ಯ ಪೆಟ್ರೋಲ್ ದರ ಗಗನಕ್ಕೇರಿದ್ದು ದಿನಕ್ಕೆ ₹ 100 ಅಗತ್ಯವಿದೆ. ಆರೋಗ್ಯ ನಿರೀಕ್ಷಕರು ದಿನಕ್ಕೆ 30 ರಿಂದ 40 ಕಿ.ಮೀ ಪ್ರಯಾಣಿಸುತ್ತಾರೆ. ಪ್ರಸ್ತುತ ಸಾರಿಗೆ ಭತ್ಯೆಯಾಗಿ ಮಾಸಿಕ ₹400 ನೀಡಲಾಗುತ್ತಿದೆ. ಸ್ವಚ್ಛತೆ ನೌಕರರಿಗೆ ಸಮವಸ್ತ್ರ ತೊಳೆಯುವ ಭತ್ಯೆ ಮಾಸಿಕ ₹ 30 ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಸೋಲಾಪುರ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ನೌಕರರಿಗೆ ಅನೇಕ ವರ್ಷಗಳಿಂದ ಭತ್ಯೆಗಳನ್ನು ಹೆಚ್ಚಿಸಿಲ್ಲ. ತಕ್ಷಣ ಪಾಲಿಕೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ನೌಕರರ ಭತ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ:</strong> ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭತ್ಯೆ ರೂಪದಲ್ಲಿ ಅತ್ಯಲ್ಪ ಮೊತ್ತವನ್ನು ಪಾವತಿಸಲಾಗುತ್ತಿದ್ದು, ಈ ಭತ್ಯೆಯನ್ನು ಪಾಲಿಕೆ ಹೆಚ್ಚಿಸಬೇಕು ಎಂದು ಪೌರಕಾರ್ಮಿಕರ ಸಂಘಟನೆಯ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಜಾನರಾವ್ ಆಗ್ರಹಿಸಿದ್ದಾರೆ. </p>.<p>ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಪಾಲಿಕೆಯ ನೌಕರರು ಹಣದುಬ್ಬರ, ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ನೌಕರರಿಗೆ ಭತ್ಯೆಯನ್ನು ಅಗತ್ಯಕ್ಕೆ ತಕ್ಕಂತೆ ಕಾಲಕಾಲಕ್ಕೆ ಹೆಚ್ಚಿಸಬೇಕು ಎಂದಿದ್ದಾರೆ.</p>.<p>ಪಾಲಿಕೆಯಲ್ಲಿ ಅಂದಾಜು 4 ಸಾವಿರ ಜನರು ಕೆಲಸ ಮಾಡುತ್ತಿದ್ದಾರೆ. ಪೌರಕಾರ್ಮಿಕರು, ಆರೋಗ್ಯ ನಿರೀಕ್ಷಕರು ಹಾಗೂ ವಿವಿಧ ವಿಭಾಗದ ಉದ್ಯೋಗಿಗಳಿಗೆ ವಿವಿಧ ಭತ್ಯೆಗಳನ್ನು ನೀಡಲಾಗುತ್ತಿದೆ. ಆದರೇ ಕಳೆದ ಅನೇಕ ವರ್ಷಗಳಿಂದ ಈ ಭತ್ಯೆಗಳ ಮೊತ್ತದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. </p>.<p>ಆರೋಗ್ಯ ನಿರೀಕ್ಷಕರಿಗೆ ಪೆಟ್ರೋಲ್ ಭತ್ಯೆಗೆ ಕಳೆದ 25 ವರ್ಷಗಳಿಂದ ಮಾಸಿಕ ₹ 100 ನೀಡಲಾಗುತ್ತಿದೆ. ಸದ್ಯ ಪೆಟ್ರೋಲ್ ದರ ಗಗನಕ್ಕೇರಿದ್ದು ದಿನಕ್ಕೆ ₹ 100 ಅಗತ್ಯವಿದೆ. ಆರೋಗ್ಯ ನಿರೀಕ್ಷಕರು ದಿನಕ್ಕೆ 30 ರಿಂದ 40 ಕಿ.ಮೀ ಪ್ರಯಾಣಿಸುತ್ತಾರೆ. ಪ್ರಸ್ತುತ ಸಾರಿಗೆ ಭತ್ಯೆಯಾಗಿ ಮಾಸಿಕ ₹400 ನೀಡಲಾಗುತ್ತಿದೆ. ಸ್ವಚ್ಛತೆ ನೌಕರರಿಗೆ ಸಮವಸ್ತ್ರ ತೊಳೆಯುವ ಭತ್ಯೆ ಮಾಸಿಕ ₹ 30 ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<p>ಸೋಲಾಪುರ ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುವ ನೌಕರರಿಗೆ ಅನೇಕ ವರ್ಷಗಳಿಂದ ಭತ್ಯೆಗಳನ್ನು ಹೆಚ್ಚಿಸಿಲ್ಲ. ತಕ್ಷಣ ಪಾಲಿಕೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ನೌಕರರ ಭತ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>