<p><strong>ಪಂಢರಪುರ (ಚಡಚಣ/ವಿಜಯಪುರ):</strong> ಕಾರ್ತೀಕ ಏಕಾದಶಿ ಹಿನ್ನೆಲೆಯಲ್ಲಿ ಗುರುವಾರ ಪಂಢರಪುರಕ್ಕೆ ಭಕ್ತ ಸಾಗರವೇ ಹರಿದು ಬಂದಿತು.</p>.<p>ಕಾರ್ತಿಕ ಏಕಾದಶಿ ಮುನ್ನಾ ದಿನವೇ ವಾರಿ (ಪಾದಯಾತ್ರೆ) ಮೂಲಕ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತೆಲಂಗಾಣ ರಾಜ್ಯದ ಸುಮಾರು ಮೂರು ಲಕ್ಷಕ್ಕೂ ಅಧಿಕ ಭಕ್ತರು ಪಂಢರಪುರಕ್ಕೆ ಆಗಮಿಸಿ, ಇಲ್ಲಿನ ಚಂದ್ರಭಾಗ ನದಿಯಲ್ಲಿ ಸ್ನಾನ ಮಾಡಿ ವಿಠ್ಠಲನ ದರ್ಶನ ಪಡೆದರು.</p>.<p>ಸಂಪ್ರದಾಯದಂತೆ ಮಹಾರಾಷ್ಟ್ರ ಸರ್ಕಾರದ ಪ್ರಥಮ ಪೂಜೆಯನ್ನು ಈ ಬಾರಿ ಉಪ ಮುಖ್ಯಮಂತ್ರಿ ದೇವೀಂದ್ರ ಫಡ್ನವಿಸ್ ದಂಪತಿ ನೆರವೇರಿಸಿದರು. </p>.<p><strong>ನಾಮ ಸಂಕೀರ್ತನೆ: </strong>ಏಕಾದಶಿ ದಿನದಂದು ವಾರ್ಕರಿ ಸಪ್ತಾಹ ಜರುಗಿತು. ಸಂತ ಜ್ಞಾನೇಶ್ವರ, ಏಕನಾಥ, ತುಕಾರಾಮ, ಪುಂಡಲೀಕ ನಾಮದೇವ, ದಾಮಾಜಿ, ಮೀರಾಬಾಯಿ, ಮುಕ್ತಾಬಾಯಿ, ಕಬೀರದಾಸ, ರಾಮದಾಸ, ತುಳಸಿದಾಸ, ಸೂರದಾಸರ ಅಭಂಗ ಪಧ್ಯಗಳನ್ನು ವಾರ್ಕರಿ ರಾಗದಿಂದ ಹಾಡುತ್ತಾ ಕುಣಿಯುತ್ತ ಭಜನೆ, ನಾಮ ಸಂಕೀರ್ತನೆಗಳಲ್ಲಿ ಭಕ್ತರು ಮೈಮರೆತರು.</p>.<p>ತುಳಸಿ ಮಾಲೆ ಧರಿಸಿದ ಸಂತರು, ತಲೆಯ ಮೇಲೆ ತುಳಸಿಕಟ್ಟೆ ಹೊತ್ತು, ಹೆಜ್ಜೆ ಹಾಕುತ್ತಾ ಕೈ ಕೈ ಹಿಡಿದುಕೊಂಡು ಕುಣಿದು ಸಂಭ್ರಮಿಸಿ ಗೋಪಾಲನಿಗೆ ಜೈಕಾರ ಹಾಕಿದರು. ಪಂಢರಪುರದ ಪ್ರಮುಖ ಬೀದಿಗಳಲ್ಲಿ ಸಂಜೆ ವಿಠ್ಠಲ ರುಕ್ಮಿಣಿ ಪಲ್ಲಕ್ಕಿ ಉತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಂಢರಪುರ (ಚಡಚಣ/ವಿಜಯಪುರ):</strong> ಕಾರ್ತೀಕ ಏಕಾದಶಿ ಹಿನ್ನೆಲೆಯಲ್ಲಿ ಗುರುವಾರ ಪಂಢರಪುರಕ್ಕೆ ಭಕ್ತ ಸಾಗರವೇ ಹರಿದು ಬಂದಿತು.</p>.<p>ಕಾರ್ತಿಕ ಏಕಾದಶಿ ಮುನ್ನಾ ದಿನವೇ ವಾರಿ (ಪಾದಯಾತ್ರೆ) ಮೂಲಕ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ, ತೆಲಂಗಾಣ ರಾಜ್ಯದ ಸುಮಾರು ಮೂರು ಲಕ್ಷಕ್ಕೂ ಅಧಿಕ ಭಕ್ತರು ಪಂಢರಪುರಕ್ಕೆ ಆಗಮಿಸಿ, ಇಲ್ಲಿನ ಚಂದ್ರಭಾಗ ನದಿಯಲ್ಲಿ ಸ್ನಾನ ಮಾಡಿ ವಿಠ್ಠಲನ ದರ್ಶನ ಪಡೆದರು.</p>.<p>ಸಂಪ್ರದಾಯದಂತೆ ಮಹಾರಾಷ್ಟ್ರ ಸರ್ಕಾರದ ಪ್ರಥಮ ಪೂಜೆಯನ್ನು ಈ ಬಾರಿ ಉಪ ಮುಖ್ಯಮಂತ್ರಿ ದೇವೀಂದ್ರ ಫಡ್ನವಿಸ್ ದಂಪತಿ ನೆರವೇರಿಸಿದರು. </p>.<p><strong>ನಾಮ ಸಂಕೀರ್ತನೆ: </strong>ಏಕಾದಶಿ ದಿನದಂದು ವಾರ್ಕರಿ ಸಪ್ತಾಹ ಜರುಗಿತು. ಸಂತ ಜ್ಞಾನೇಶ್ವರ, ಏಕನಾಥ, ತುಕಾರಾಮ, ಪುಂಡಲೀಕ ನಾಮದೇವ, ದಾಮಾಜಿ, ಮೀರಾಬಾಯಿ, ಮುಕ್ತಾಬಾಯಿ, ಕಬೀರದಾಸ, ರಾಮದಾಸ, ತುಳಸಿದಾಸ, ಸೂರದಾಸರ ಅಭಂಗ ಪಧ್ಯಗಳನ್ನು ವಾರ್ಕರಿ ರಾಗದಿಂದ ಹಾಡುತ್ತಾ ಕುಣಿಯುತ್ತ ಭಜನೆ, ನಾಮ ಸಂಕೀರ್ತನೆಗಳಲ್ಲಿ ಭಕ್ತರು ಮೈಮರೆತರು.</p>.<p>ತುಳಸಿ ಮಾಲೆ ಧರಿಸಿದ ಸಂತರು, ತಲೆಯ ಮೇಲೆ ತುಳಸಿಕಟ್ಟೆ ಹೊತ್ತು, ಹೆಜ್ಜೆ ಹಾಕುತ್ತಾ ಕೈ ಕೈ ಹಿಡಿದುಕೊಂಡು ಕುಣಿದು ಸಂಭ್ರಮಿಸಿ ಗೋಪಾಲನಿಗೆ ಜೈಕಾರ ಹಾಕಿದರು. ಪಂಢರಪುರದ ಪ್ರಮುಖ ಬೀದಿಗಳಲ್ಲಿ ಸಂಜೆ ವಿಠ್ಠಲ ರುಕ್ಮಿಣಿ ಪಲ್ಲಕ್ಕಿ ಉತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>