<p><strong>ಇಂಡಿ (ವಿಜಯಪುರ ಜಿಲ್ಲೆ):</strong> ತಾಲ್ಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಗ್ರಾಮದ ನಿವಾಸಿ ಶಂಕರ ಚಂದ್ರಶೇಖರ ಕಡಣಿ ಎಂಬುವರು ಮಂಗಳವಾರ ಇಂಡಿ ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ 250 ಅಡಿ ಎತ್ತರದ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿದ್ದು ಆತಂಕಕ್ಕೆ ಕಾರಣವಾಯಿತು.</p>.<p>‘ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆಯಿದ್ದು, ಪರಿಹರಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ. ನೀರಿನ ಸಮಸ್ಯೆ ಬಗೆಹರಿಸಿದರೆ ಮಾತ್ರ ಕೆಳಗಿಳಿಯುವೆ’ ಎಂದು ಶಂಕರ ಕಡಣಿ ತಿಳಿಸಿದರು.</p>.<p>ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ಠಾಣಾ ಅಧಿಕಾರಿಗಳು, ಸಿಬ್ಬಂದಿ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿದರು. ಒಂದು ವೇಳೆ ಟವರ್ನಿಂದ ಜಿಗಿದಲ್ಲಿ, ರಕ್ಷಣೆಗಾಗಿ ಜಾಳಿಗೆಯ ವ್ಯವಸ್ಥೆ ಕೂಡ ಮಾಡಿಕೊಂಡರು.</p>.<p>‘ನೀರಿನ ಸಮಸ್ಯೆ ನಿವಾರಿಸುವುದಾಗಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಹಶೀಲ್ದಾರ್ ಮನವೊಲಿಸಿದ ಬಳಿಕ ಶಂಕರ ಟವರ್ನಿಂದ ಕೆಳಗಿಳಿದು ಬಂದರು. ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗುವುದು’ ಎಂದು ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ (ವಿಜಯಪುರ ಜಿಲ್ಲೆ):</strong> ತಾಲ್ಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಗ್ರಾಮದ ನಿವಾಸಿ ಶಂಕರ ಚಂದ್ರಶೇಖರ ಕಡಣಿ ಎಂಬುವರು ಮಂಗಳವಾರ ಇಂಡಿ ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ 250 ಅಡಿ ಎತ್ತರದ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿದ್ದು ಆತಂಕಕ್ಕೆ ಕಾರಣವಾಯಿತು.</p>.<p>‘ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆಯಿದ್ದು, ಪರಿಹರಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ. ನೀರಿನ ಸಮಸ್ಯೆ ಬಗೆಹರಿಸಿದರೆ ಮಾತ್ರ ಕೆಳಗಿಳಿಯುವೆ’ ಎಂದು ಶಂಕರ ಕಡಣಿ ತಿಳಿಸಿದರು.</p>.<p>ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ಠಾಣಾ ಅಧಿಕಾರಿಗಳು, ಸಿಬ್ಬಂದಿ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿದರು. ಒಂದು ವೇಳೆ ಟವರ್ನಿಂದ ಜಿಗಿದಲ್ಲಿ, ರಕ್ಷಣೆಗಾಗಿ ಜಾಳಿಗೆಯ ವ್ಯವಸ್ಥೆ ಕೂಡ ಮಾಡಿಕೊಂಡರು.</p>.<p>‘ನೀರಿನ ಸಮಸ್ಯೆ ನಿವಾರಿಸುವುದಾಗಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಹಶೀಲ್ದಾರ್ ಮನವೊಲಿಸಿದ ಬಳಿಕ ಶಂಕರ ಟವರ್ನಿಂದ ಕೆಳಗಿಳಿದು ಬಂದರು. ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗುವುದು’ ಎಂದು ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>